1:51 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

DK | ವಾಹನ ಸಂಚಾರ ಸಮೀಕ್ಷೆ ನಾಳೆಯಿಂದ ಶುರು: 139 ಗಣತಿ ಕೇಂದ್ರಗಳು; ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಸರ್ವೇ

25/02/2026, 15:01

ಮಂಗಳೂರು(reporterkarnataka.com): ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, 2026 ನೇ ಸಾಲಿನಲ್ಲಿ ರಸ್ತೆ ಸಂಚಾರ ಸಮೀಕ್ಷೆಯನ್ನು ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 28 ರ ಬೆಳಿಗ್ಗೆ 6 ಗಂಟೆಯವರೆಗೆ 2 ದಿನಗಳ ಕಾಲ ನಡೆಸಲಾಗುತ್ತದೆ.
ದ.ಕ. ಜಿಲ್ಲೆಯಲ್ಲಿ ಲೋಕೋಪಯೋಗಿ ಇಲಾಖಾ ವತಿಯಿಂದ ಈ ಸಮೀಕ್ಷೆಗೆ ಸುಮಾರು 139 ಗಣತಿ ಕೇಂದ್ರಗಳನ್ನು ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಆಯ್ಕೆ ಮಾಡಲಾಗಿದೆ. ಈ ವಾಹನ ಸಂಚಾರ ಸಮೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ವಾಹನ ಚಾಲಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಮಂಗಳೂರು ವಿಭಾಗದ
ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು