ಇತ್ತೀಚಿನ ಸುದ್ದಿ
ಹಳೆ ಆರೋಪಿಯ ಸೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖದೀಮನ ಬಂಧಿಸಿದ ಬಂಟ್ವಾಳ ಪೊಲೀಸರು
25/02/2026, 17:14
ಬಂಟ್ವಾಳ(reporterkarnataka.com): ಅಪರಾಧ ಪ್ರಕರಣಗಳಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ನಿವಾಸಿ ತಾಜ್ ಮೊಹಮ್ಮದ್ ಯುಸೂಫ್ (59), ಎಂಬಾತನನ್ನು ಮಂಗಳವಾರ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ. ಮತ್ತು ಕೃಷ್ಣಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪಿಸಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ, ಪ್ರವೀಣ್ ಅವರುಗಳ ತಂಡ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ದಸ್ತಗಿರಿ ಮಾಡಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿತನಿಗರ ನ್ಯಾಯಾಂಗ ಬಂಧನ ವಿಧಿಸಿದೆ.













