11:14 AM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

Panemangalore | ಶ್ರೀ ಕ್ಷೇತ್ರ ಪಾಣೇರು ಬಸದಿ: ಏಕಶಿಲಾ ಮಾನಸ್ತಂಭದ ಸ್ಥಾಪನಾ ಸಮಾರಂಭ

26/02/2026, 11:14

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಪಾಣೇರು ಭ.1008 ಶ್ರೀ ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದಲ್ಲಿ ಭವ್ಯ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮ ಇತ್ತೀಚಿಗೆ ವಿದ್ಯುಕ್ತವಾಗಿ ನಡೆಯಿತು.
ಪರಮ ಪೂಜ್ಯ ಮುನಿ ಶ್ರೀ 108 ಚಂದ್ರಸಾಗರ ಮಹಾರಾಜರ ಪುಣ್ಯ ಸ್ಮರಣೆ ಯೊಂದಿಗೆ, ಪರಮ ಪೂಜ್ಯ ಮುನಿ ಶ್ರೀ 108 ಪರಮ ಸಾಗರ ಮಹಾರಾಜರು, ಪರಮ ಪೂಜ್ಯ ಮುನಿ ಶ್ರೀ 108 ಶ್ರೀ ವೀರ ಸಾಗರ ಮಹಾರಾಜರ ಶುಭಾಶೀರ್ವಾದಗಳೊಂದಿಗೆ, ಸೀಮೆಯ ಗುರುಗಳಾದ ಮೂಡುಬಿದಿರೆ ಶ್ರೀ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರು ಆಶೀರ್ವಾದದೊಂದಿಗೆ, ಬೆಂಗಳೂರಿನ ಶಶಿಕಲಾ ಮತ್ತು ಸಂಪತ್ ಕುಮಾರ್ ಮತ್ತು ಮಕ್ಕಳು ಸಹಕಾರದಿಂದ ಏಕಶಿಲಾ ಮಾನಸ್ತಂಭದ ಸ್ಥಾಪನಾ ಕಾರ್ಯಕ್ರಮವು ಪಾಣೆಮಂಗಳೂರು ಬಸದಿಯ ಸಮಸ್ತ ಶ್ರಾವಕ ಬಂಧುಗಳ ಉಪಸ್ಥಿತಿಯಲ್ಲಿ ಬೃಹತ್ ಕ್ರೇನ್ ಸಹಾಯದಿಂದ ಧಾರ್ಮಿಕ ವಿಧಿ ವಿಧಾನ ಪೂರ್ವಕವಾಗಿ ಸ್ಥಾಪಿಸಲಾಯಿತು.


ಶ್ರೀ ಕ್ಷೇತ್ರ ಪಾಣೇರು ಬಸದಿಯ ಸಮಿತಿಯ ಅಧ್ಯಕ್ಷ ಸಂಪತ್ ಕುಮಾರ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮೋಹನ್ ರಾಜ್ ಚೌಟ, ಕಾರ್ಯದರ್ಶಿಗಳಾದ ಭುವನೇಂದ್ರ ಇಂದ್ರ, ಪ್ರಶಾಂತ್ ಜೈನ್, ಕಾರ್ಯನಿರ್ವಾಹಕರಾದ ಧರಣೇಂದ್ರ ಇಂದ್ರರು ಮತ್ತು ಸಮಿತಿಯ ಸರ್ವ ಸದಸ್ಯರು, ಗಣ್ಯ ಬಂಧುಗಳು, ಶ್ರಾವಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು