ಇತ್ತೀಚಿನ ಸುದ್ದಿ
ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು
27/02/2026, 13:05
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ವಿರಾಜಪೇಟೆಯ ಅಮ್ಮತ್ತಿಯಲ್ಲಿ ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ದ್ವಿಚಕ್ರ ವಾಹನದ ಹಿಂದೆ ಬರುತ್ತಿದ್ದ ಕಾರು ಹರಿದು ಸಾವನಪ್ಪಿರುವ ಘಟನೆ ನಡೆದಿದೆ.
ಅಮ್ಮತ್ತಿ ಗ್ರಾಮದ ಆನಂದಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯನೇ ಆದ ಏನೋಸ್ ಮನೋಹರ್-ಮನು (43) ಮೃತ ವ್ಯಕ್ತಿಯಾಗಿದ್ದು, ದ್ವಿಚಕ್ರ ವಾಹನದಲ್ಲಿ ಇದ್ದ ಸವಾರ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಹಂಸ ಗಂಭೀರ ಗಾಯಗೊಂಡಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ, ಇತ್ತ ಅಮಾಯಕನ ಸಾವಿಗೆ ಕಾರಣವಾದ ಕಾರು ಸ್ಥಳದಿಂದ ಎಸ್ಕೇಪ್ ಆಗಿದ್ದು ಸಿದ್ದಾಪುರ ಪೊಲೀಸರು ಕಾರಿನ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.












