8:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕದ್ರಿ, ಶಕ್ತಿನಗರ ಪ್ರದೇಶದಲ್ಲಿ ರಾತ್ರಿ ವೇಳೆ ಕಾಣಿಸಿಕೊಳ್ಳುವ ಚಿರತೆ: ಶಾಸಕ ಕಾಮತ್ ಅಧಿಕಾರಿಗಳ ಜತೆ ಸಭೆ

27/02/2026, 20:19

ಮಂಗಳೂರು(reporterkarnataka.com): ನಗರದ ಕದ್ರಿ, ಶಕ್ತಿನಗರ, ಭಾಗಗಳಲ್ಲಿ ರಾತ್ರಿ ವೇಳೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಹಿತದೃಷ್ಟಿಯಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡರು.
ಕದ್ರಿ ಕೈಬಟ್ಟಲ್, ಶಕ್ತಿನಗರದ ಕೋರ್ಡೆಲ್‌ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾಗಳಲ್ಲಿ ದಾಖಲಾಗಿದ್ದು, ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯಿಂದ ಬೋನುಗಳನ್ನು ಇಡಲಾಗಿದೆ. ಈ ಎರಡೂ ಭಾಗಗಳಲ್ಲಿ ಕಾಣಿಸಿಕೊಂಡ ಚಿರತೆ ಒಂದೇ ಆಗಿರುವ ಸಾಧ್ಯತೆಯೂ ಇದೆ. ಚಿರತೆ ಸಂಚಾರ ಮಾಡಿರುವ ಪ್ರದೇಶದಲ್ಲಿ ಹಗಲು ರಾತ್ರಿ ಗಸ್ತು ತಿರುಗಲು ಅರಣ್ಯ ಇಲಾಖೆ ಸಿಬ್ಬಂದಿಯ ತಂಡವನ್ನು ನಿಯೋಜಿಸಿದ್ದೇವೆ. ಸದ್ಯ ಚಿರತೆ ಇಲ್ಲೇ ಉಳಿದಿರದೇ, ಕಾಡು ಪ್ರದೇಶಕ್ಕೆ ಮರಳಿರುವ ಬಗ್ಗೆ ಅಂದಾಜಿಸಲಾಗಿದೆ. ಹಾಗಿದ್ದೂ ಸಾರ್ವಜನಿಕರು ಚಿರತೆ ಸಹಿತ ಯಾವುದೇ ಅಪಾಯಕಾರಿ ಕಾಡುಪ್ರಾಣಿಗಳು ಕಂಡು ಬಂದಲ್ಲಿ ಕೂಡಲೇ ಅರಣ್ಯ ಇಲಾಖೆಯ ಟೋಲ್ ಫ್ರೀ ಸಂಖ್ಯೆ 1926 ಗೆ ಮಾಹಿತಿ ನೀಡಿ ಸಹಕರಿಸಿದರೆ ಇನ್ನಷ್ಟು ತ್ವರಿತ ಮತ್ತು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಸಹಾಯವಾಗುತ್ತದೆ ಎಂದು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ ರವರು ಶಾಸಕರ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಾಡು ಪ್ರಾಣಿಗಳು ಆಹಾರ ಅರಸಿಕೊಂಡು ನಾಡಿಗೆ ಬರುತ್ತಿರುವುದು ಸೂಕ್ಷ್ಮ ವಿಚಾರವಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಜೊತೆಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೂ ಸಹ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಶಾಸಕರು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು