2:17 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿ

28/02/2026, 15:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಿರಂತರ ಕಾಡಾನೆ ದಾಳಿಯಿಂದ ಮಲೆನಾಡಿಗರು ಕಂಗಾಲಾಗಿದ್ದು, ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಇಂದು ಕಾಡಾನೆ ದಾಳಿ ಪ್ರದೇಶಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿಯಾಗಲಿದ್ದು, ರೈತರು ಗ್ರಾಮಸ್ಥರ ಜೊತೆ ಸಂವಾದ ನಡೆಸಲಿದ್ದಾರೆ. ರೈತರ ಜೊತೆ ಅರಣ್ಯ ಸಚಿವ ಮಾತಕತೆ ನಡೆಸುವಂತೆ ಮಲೆನಾಡಿಗರು ಆಗ್ರಹಿಸಿದ್ದರು. ಅಧಿಕಾರಿಗಳು ಕೊಡೋ ಕಾರಣವೇ ಪರಿಹಾರವಲ್ಲ, ರೈತರ ಜೊತೆ ಚರ್ಚಿಸಿ ಎಂದು ಮಲೆನಾಡಿಗರು ಆಗ್ರಹಿಸಿದ್ದರು.
ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಲ್ಲಿ ಸಚಿವರು ಸಭೆ ನಡೆಸಲಿದ್ದಾರೆ.
ಇತ್ತೀಚಿಗೆ ಕಾಡಾನೆ ದಾಳಿಗೆ ಮಹಿಳೆ ಬಲಿ ವೇಳೆ ಕಡಬಗೆರೆಯಲ್ಲಿ ಕಲ್ಲು ತೂರಾಟ ನಡೆದಿತ್ತು. ಲಾಠಿ ಚಾರ್ಜ್ ನಡೆಸಿ ರೈತರ ತೀವ್ರ ಆಕ್ರೋಶಕ್ಕೆ ಜಿಲ್ಲಾಡಳಿತ ಗುರಿಯಾಗಿತ್ತು.
ಶವವನ್ನ ರಸ್ತೆಯಲ್ಲಿಟ್ಟು ಈಶ್ವರ ಖಂಡ್ರೆ ಬರುವಂತೆ ಗ್ರಾಮಸ್ಥರು ಪಟ್ಟು ಹಿಡಿದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು