7:12 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ ಭೇಟಿ: ಝಡ್‌ ಪ್ಲಸ್‌ ಭದ್ರತೆ

28/02/2026, 15:30

ಸುಬ್ರಹ್ಮಣ್ಯ(reporterkarnataka.com): ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್‌.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು.
ಸಂಜೆ 5.20ಕ್ಕೆ ಹೆಲಿಕಾಫ್ಟರ್‌ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸ ವೇಳೆ ಮಾಜಿ ಪ್ರಧಾನಿ ಅವರಿಗೆ ಝಡ್‌ ಪ್ಲಸ್‌ ಭದ್ರತೆ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು