ಇತ್ತೀಚಿನ ಸುದ್ದಿ
Belagavi | ದ್ವಿತೀಯ ಪಿಯು ಪರೀಕ್ಷೆ ಬರೆಯಲು ಹೊರಟಿದ್ದ ವಿದ್ಯಾರ್ಥಿನಿಗೆ ಹೃದಯಾಘಾತ: ಸಾವು
28/02/2026, 16:08
ಬೆಳಗಾವಿ(reporterkarnataka.com): ಜಿಲ್ಲೆಯ ಚಿಕ್ಕೋಡಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹೃದಯಘಾತದಿಂದ ಸಾವನಪ್ಪಿದ್ದಾಳೆ.
ಚಿಕ್ಕೋಡಿಯ ಬಂಬಲವಾಡ ಗ್ರಾಮದ ಭೂಮಿಕಾ ಮಾಳಂಗಿ(17) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡು ಮನೆಯಿಂದ ಹೊರ ಬರುತ್ತಿದ್ದoತೆ ಕುಸಿದು ಬಿದ್ದಿದ್ದಾಳೆ, ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ, ಮಾರ್ಗ ಮದ್ಯೆಯೇ ಮೃತ ಪಟ್ಟಿರುವ ಬಗ್ಗೆ ವೈದ್ಯರು ದೃಢ ಪಡಿಸಿದ್ದಾರೆ. ಭವಿಷ್ಯದ ಕನಸ್ಸು ಕಂಡು ಪರೀಕ್ಷೆಗೆ ಹೊರಟಿದ್ದ ಭೂಮಿಕಾ ಇದೀಗ ಬಾಳ ಪರೀಕ್ಷೆ ಮುಗಿಸಿ ಹೋಗಿರುವುದು ಕುಟುಂಬದಲ್ಲಿ ಶೋಕ ಮಡುಗಟ್ಟಿದೆ.












