3:05 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ವಿಬಿಜಿ ರಾಮ್ ಜಿ ಕಾಯ್ದೆ ಬಗ್ಗೆ ಕಾಂಗ್ರೆಸ್ ತಪ್ಪು ಸಂದೇಶ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪ

01/03/2026, 14:56

ಹುಬ್ಬಳ್ಳಿ(reporterkarnataka.com): ‘ವಿಬಿಜಿ ರಾಮ್ ಜಿ ಕಾಯ್ದೆ’ ಬಗ್ಗೆ ದೇಶದ ಜನಕ್ಕೆ ಕಾಂಗ್ರೆಸ್ ತಪ್ಪು ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು.
ಹುಬ್ಬಳ್ಳಿಯ ಅರವಿಂದ ನಗರದಲ್ಲಿರವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವಿಬಿಜಿ ರಾಮ್ ಜಿ’ ಕುರಿತು ಮಾತನಾಡಿದರು.

ಈ ಹಿಂದೆ ಮನರೇಗಾದಲ್ಲಿ ಅನುದಾನ ಸೋರಿಕೆ ದೊಡ್ಡ ಪ್ರಮಾಣದಲ್ಲಿತ್ತು. ಭ್ರಷ್ಟಾಚಾರ ವ್ಯಾಪಕವಾಗಿತ್ತು. ಅಲ್ಲದೆ, ನಕಲಿ ಜಾಬ್ ಕಾರ್ಡ್ಗಳನ್ನು ಸಹ ಸೃಷ್ಟಿಸಲಾಗ್ತಿತ್ತು. ಇದೀಗ ಇದೆಲ್ಲದಕ್ಕೂ ಬ್ರೇಕ್ ಬೀಳಲಿದೆ. ಆ ಕಾರಣಕ್ಕೆ ಕಾಂಗ್ರೆಸ್ ತಗಾದೆ ತೆಗೆಯುತ್ತಿದೆ ಎಂದು ಆರೋಪಿಸಿದರು.
ಎನ್ ಡಿ ಎ ಸರ್ಕಾರ ಜಾರಿ ತಂದ ವಿಬಿ-ಜಿ ರಾಮ್ ಜಿ ಯೋಜನೆ ಮೂಲಕ ಗ್ರಾಮೀಣ ಭಾಗದ ಜನರಿಗೆ 125 ದಿನಗಳ ಉದ್ಯೋಗ ಖಾತರಿ ದೊರೆಯಲಿದೆ. AI-ಚಾಲಿತ ಮೇಲ್ವಿಚಾರಣೆ, ಬಯೋಮೆಟ್ರಿಕ್‌ ಹಾಜರಾತಿ ಮತ್ತು ಡಿಜಿಟಲ್‌ ಲೆಕ್ಕಪರಿಶೋಧನೆಗಳೊಂದಿಗೆ ಈಗ ಸಂಪೂರ್ಣ ಪ್ರಕ್ರಿಯೆ ಪಾರದರ್ಶಕವಾಗಲಿದೆ ಎಂದು ಹೇಳಿದರು.
ವಿಬಿ-ಜಿ ರಾಮ್ ಜಿ ಭ್ರಷ್ಟಾಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಲಿದೆ. ಅಲ್ಲದೆ, ಗ್ರಾಮೀಣ ಭಾರತದ ಆರ್ಥಿಕತೆಗೆ ಹೊಸ ಶಕ್ತಿ ನೀಡಲಿದೆ ಮತ್ತು ವಿಕಸಿತ ಭಾರತ ನಿರ್ಮಾಣಕ್ಕೆ ಮಹತ್ವದ ಹೆಜ್ಜೆಯಾಗಲಿದೆ ಎಂದು ಪ್ರತಿಪಾದಿಸಿದರು.
‎ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ನಾರಾಯಣ ಬಾಂಡಗೆ, ಪರಿಷತ್ ಸದಸ್ಯ ಎಸ್.ವಿ.ಸಂಕನೂರು, ಕೇಶವ ಪ್ರಸಾದ, ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ ಛಬ್ಬಿ, ಧಾರವಾಡ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಬಸವರಾಜ್ ಕುಂದಗೋಳಮಠ, ರವಿ ದಂಡಿನ, ಈರಣ್ಣ ಜಡಿ, ಕಲಘಟಗಿ ಮಂಡಳ ಅಧ್ಯಕ್ಷ ಯಲ್ಲಾರಿ ಶಿಂಧೆ, ಅಳ್ನಾವರ ಮಂಡಳ ಅಧ್ಯಕ್ಷ ಯಲ್ಲಪ್ಪ ಹುಲಿಯಪ್ಪನವರ, ಶಶಿ ನಿಂಬಣ್ಣವರ, ಕಲ್ಮೇಶ ಬೇಲೂರು ಸೇರಿದಂತೆ ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಗಣ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು