9:12 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್- ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ

01/03/2026, 15:00

ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ಪಶ್ಚಾತ್ತಾಪ, ಪ್ರಾಯಶ್ಚಿತ, ತ್ಯಾಗ ಮತ್ತು ಶಿಲುಬೆಯ ಹಾದಿಯ ಮೇಲೆ ಕೇಂದ್ರೀಕರಿಸಿವೆ. 40 ದಿನಗಳ ಅವಧಿಯ ತಪಸ್ಸು ಕಾಲದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ. ಕ್ರಿಸ್ತ ಶಕ 4 ನೇ ಶತಮಾನದಿಂದ ಅಂದರೆ ಕ್ರಿ.ಶ. 325 ರಿಂದ ತಪಸ್ಸು ಕಾಲ ಅಧಿಕೃತವಾಗಿ ಆರಂಭವಾಯಿತು ಎಂಬುದಾಗಿ ಇತಿಹಾಸದ ಪುಟಗಳಿದ ತಿಳಿದು ಬರುತ್ತದೆ. ಅಂದಿನಿಂದಲೇ ಇದಕ್ಕೆ ಸಂಬಂಧಿಸಿದ ವಿಶೇಷ ಭಕ್ತಿ ಗೀತೆಗಳ ಗಾಯನ ಪದ್ದತಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ.

ಇದನ್ನು ಗಮನದಲ್ಲಿ ಇರಿಸಿ ಮಾರ್ಚ್ 15ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್, ವಾಮಂಜೂರಿನ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ಮತ್ತು ಕೆಲರಾಯ್ ಸಂತ ಅನ್ನಾ ಚರ್ಚ್ ನ ಸಹಯೋಗದಲ್ಲಿ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂಜೆ 6 ಗಂಟೆಗೆ ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್ ಎಂಬ ತಪಸ್ಸು ಕಾಲದ ಕೊಂಕಣಿ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಮೂರು ಚರ್ಚ್ ಗಳ ಗಾಯನ ಮಂಡಳಿಗಳ ಸದಸ್ಯರು ತಲಾ ನಾಲ್ಕು ಗೀತೆಗಳನ್ನು ಅವುಗಳ ವಿವರಣೆಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು