6:43 PM Sunday1 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

01/03/2026, 18:43

ಶಿವಮೊಗ್ಗ(reporterkarnataka.com): ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.

*ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು:*
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

*ಅಮೆರಿಕದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ:*
ಅಮೆರಿಕ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

*ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ:*
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು