6:22 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Mangaluru | ಪಾಲ್ದನೆ ಚರ್ಚ್ ನಲ್ಲಿ ಸೈಬರ್ ಕ್ರೈಮ್ ಮಾಹಿತಿ ಕಾರ್ಯಕ್ರಮ

02/03/2026, 11:37

ಮಂಗಳೂರು(reporterkarnataka.com): ನಗರದ ಪಾಲ್ದನೆ ಸಂತ ತೆರೆಜಾ ಚರ್ಚ್ ನಲ್ಲಿ ಸೈಬರ್‌ ಕ್ರೈಮ್‌ ಕುರಿತಂತೆ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮ ನಡೆಯಿತು.
ಬೆಳಗ್ಗಿನ ಬಲಿ ಪೂಜೆಯ ಬಳಿಕ ಚರ್ಚ್ ನ ತೆರೆದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ವಾಮಂಜೂರಿನಲ್ಲಿರುವ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಕಾನ್‌ಸ್ಟೆಬಲ್ ಪ್ರದೀಪ್ ನಾಗನ ಗೌಡ ಅವರು ಮಾಹಿತಿ ನೀಡಿದರು. ಸೈಬರ್ ಅಪರಾಧಗಳು ಹೇಗೆ ನಡೆಯುತ್ತವೆ, ಸಾರ್ವಜನಿಕರು ಯಾವ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಬೇಕು, ಮೊಬೈಲ್‌ ಫೋನ್‌ ಗಳಿಗೆ ಅಪರಿಚಿತ ಆ್ಯಪ್‌ ಗಳು, ಸಂದೇಶಗಳು, ವಾಟ್ಸಪ್ ಲಿಂಕ್ ಗಳು ಬಂದಾಗ ಅವುಗಳನ್ನು ನಿಭಾಯಿಸುವುದು ಹೇಗೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಅವರು ವಿವರಿಸಿದರು. ಜನರ ಖಾತೆಗಳಲ್ಲಿರುವ ಹಣವನ್ನು ಸೈಬರ್ ಕಳ್ಳರು ಕಸಿದು ಕೊಳ್ಳುವ ಕುರಿತು ಮಾಹಿತಿ ನೀಡಿ ಎಚ್ಚರಿಕೆಯಿಂದ ಇರುವಂತೆ ಸಲಹೆ ಮಾಡಿದರು. ಕಾರ್ಯಕ್ರಮದಲ್ಲಿ ಚರ್ಚ್ ನ ಸದಸ್ಯರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಅವರ ಪ್ರಶ್ನೆ ಮತ್ತು ಸಂಶಯಗಳಿಗೆ ಉತ್ತರ ನೀಡಿದರು.
ಚರ್ಚ್ ನ ಧರ್ಮಗುರು ವಂದನೀಯ ಫಾ. ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ಸೈಬರ್ ಕ್ರೈಮ್ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಇಲಾಖೆಗೆ ಧನ್ಯವಾದ ಅರ್ಪಿಸಿದರು. ಚರ್ಚ್ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್, ಪೊಲೀಸ್ ಸಿಬಂದಿ ಬೀರೇಂದ್ರ, ಹನುಮಂತ ಅವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು