7:30 PM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪುತ್ತೂರು: ಅತ್ಯಂತ ಕೆಳ ಮಟ್ಟದಲ್ಲಿ ಹಲವು ಬಾರಿ ಜೆಟ್ ವಿಮಾನ ಹಾರಾಟ; ನಾಗರಿಕರಲ್ಲಿ ಆತಂಕ

03/03/2026, 19:09

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಣ್ಣ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಮೇಲ್ಬಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ ವಿವಿಧ ಭಾಗದಲ್ಲಿ ಹಾರಾಟ ನಡೆಸಿದೆ. ಸುಮಾರು10 ರಿಂದ 15 ಸುತ್ತು ಹಾರಾಟ ನಡೆಸಿದೆ.
ಇದು ಯಾರದ್ದು, ಯಾಕೆ ಹಾರಾಟ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿರಲಿಲ್ಲ. ಏಕಾಏಕಿ ವಿಮಾನ ಹಾರಾಟ ನಡೆಸುತ್ತಿದ್ದ ದೃಶ್ಯ ಜನರಲ್ಲಿ ಆತಂಕ ಮೂಡಿಸಿತು. ಕೊನೆಗೂ ಇದು ಭೂಮಿಯ ರಚನೆ, ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆ ಸರ್ವೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸರ್ವೆ ನಡೆಸುವ ಉದ್ದೇಶದಿಂದ ಈ ವಿಮಾನ ಮಂಗಳೂರು ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿತ್ತು. ಈ ಪ್ರದೇಶದಲ್ಲಿ ವೈಜ್ಞಾನಿಕ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ವಿಶೇಷವಾಗಿ ಭೂಭೌತಿಕ ಸಮೀಕ್ಷೆ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು