9:38 PM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ ಕಾಡಾನೆ ಸೆರೆ

03/03/2026, 19:47

ಹಾಸನ(reporterkarnataka.com): ಚೆನ್ನಪಟ್ಟಣ ತಾಲ್ಲೂಕಿನ ಬಿ.ವಿ. ಹಳ್ಳಿ ಹಾಗೂ ಅಪಕ್ಕಪದ ಗ್ರಾಮಗಳಲ್ಲಿ ಉಪಟಳ ನೀಡುತ್ತಿದ್ದ ಮಕ್ನಾ (ದಂತವಿಲ್ಲದ ಗಂಡಾನೆ) ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.
ಬಿ.ವಿ. ಹಳ್ಳಿಯ ಅರಣ್ಯ ಪ್ರದೇಶದ ಕೆಂಪಿಕಟ್ಟೆ ಕೆರೆ ಬಳಿ ಇದ್ದ ಆನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿ ಪ್ರಜ್ಞೆ ತಪ್ಪಿಸಿ ಸೆರೆ ಹಿಡಿಯಲಾಯಿತು. ಬಿ.ವಿ. ಹಳ್ಳಿ ಭಾಗದಲ್ಲಿ ಬೀಡುಬಿಟ್ಟಿದ್ದ ಮಕ್ನಾ, ರೈತರ ತೋಟಗಳಿಗೆ ಬಂದು ಮೇಯ್ದು ದಾಂಧಲೆ ಮಾಡುತ್ತಿತ್ತು. ಇದರಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ನಾಶವಾಗಿತ್ತು. ದಿನದಿಂದ ದಿನಕ್ಕೆ ಹೆಚ್ಚಾಗಿದ್ದ ಕಾಡಾನೆ ಸೆರೆ ಹಿಡಿಯಬೇಕು ಎಂದು ರೈತರು ಅರಣ್ಯ ಇಲಾಖೆಗೆ ಒತ್ತಾಯಿಸುತ್ತಲೇ ಬಂದಿದ್ದರು.
ಕಡೆಗೆ ಅಧಿಕಾರಿಗಳು ಮಕ್ನಾ ಸೆರೆ ಕಾರ್ಯಾಚರಣೆಗೆ ಸರ್ಕಾರದಿಂದ ಅನುಮತಿ ಪಡೆದಿದ್ದರು. ಶನಿವಾರ ಬೆಳಿಗ್ಗೆ ದುಬಾರೆ ಆನೆ ಶಿಬಿರದಿಂದ ಸುಗ್ರೀವಾ, ಕಂಜನ್, ಧನoಜಯ, ಹರ್ಷ, ಈಶ್ವರ,ಅಯ್ಯಪ್ಪ ಸೇರಿ ಆರು ಸಾಕಾನೆಗಳ ತಂಡದೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳ ಹಾಗೂ ಸಿಬ್ಬಂದಿ ಚನ್ನಪಟ್ಟಣಕ್ಕೆ ಬಂದು ಮಕ್ನಾ ಸೆರೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಭಾನುವಾರ ಬೆಳಿಗ್ಗೆ ಮಕ್ನಾ ಆನೆ ಇದ್ದ ಜಾಗವನ್ನು ಗುರುತಿಸಿದ ಅಧಿಕಾರಿಗಳು, ಅಲ್ಲಿಗೆ ಸಾಕಾನೆ ತಂಡದೊಂದಿಗೆ ಬಂದರು. ಬಂದೂಕಿನ ಮೂಲಕ ಕಾಡಾನೆಗೆ ಅರಿವಳಿಕೆ ಚುಚ್ಚುಮದ್ದು ನೀಡಿದರು. ಕೆಲ ಹೊತ್ತಿನಲ್ಲೇ ಆನೆ ಪ್ರಜ್ಞೆ ತಪ್ಪಿತು. ನಂತರ ಹಗ್ಗದಿಂದ ಕಟ್ಟಿ ಸೆರೆ ಹಿಡಿದು, ಪ್ರಜ್ಞೆ ಬಂದ ನಂತರ ಸಾಕಾನೆಗಳ ಮೂಲಕ ಲಾರಿಗಳಿದ್ದ ಜಾಗಕ್ಕೆ ಕರೆತಂದರು. ಆನಂತರ ಕ್ರೇನ್ ಮೂಲಕ ಲಾರಿಗೆ ಹತ್ತಿಸಿ ದುಬಾರೆ ಆನೆ ಶಿಬಿರಕ್ಕೆ ಸಾಗಿಸಲಾಯಿತು.
ಕಾರ್ಯಾಚರಣೆ ಕುರಿತು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ. ರಾಮಕೃಷ್ಣಪ್ಪ, ‘ಈ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದೆ. ಅದರಲ್ಲೂ ಮಕ್ನಾ ಹಾಗೂ ಟಸ್ಕರ್ ಆನೆಗಳು ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿದ್ದವು. ಇವುಗಳ ಸೆರೆಗೆ ಸರ್ಕಾರದಿಂದ ಅನುಮತಿ ಪಡೆಯಲಾಗಿದೆ. ಈಗ ಮಕ್ನಾ ಆನೆ ಸೆರೆ ಹಿಡಿದು ದುಬಾರೆಗೆ ಕಳಿಸಲಾಗಿದೆ’ ಎಂದರು.
‘ಮುಂದೆ ಟಸ್ಕರ್ ಆನೆ ಸೆರೆಗೆ ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಿ ಒಂದೆರಡು ದಿನಗಳ ನಂತರ ಟಸ್ಕರ್ ಆನೆ ಸೆರೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ತಿಳಿಸಿದರು.
ಎಸಿಎಫ್ ಪುಟ್ಟಮ್ಮ, ಚನ್ನಪಟ್ಟಣ ವಲಯ ಅರಣ್ಯಾಧಿಕಾರಿ ಮಲ್ಲೇಶ್, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಇತರರು ಹಾಜರಿದ್ದರು.

“*ಹೊಸದೊಡ್ಡಿ ಗ್ರಾಮಸ್ಥರ ಪ್ರತಿಭಟನೆ:*

ಚನ್ನಪಟ್ಟಣ ತಾಲ್ಲೂಕಿನ ಬಿ.ವಿ.ಹಳ್ಳಿ ಗ್ರಾಮದ ಬಳಿ ಸೆರೆಯಾದ ಮಕ್ನಾ ಕಾಡಾನೆ ಸಾಗಿಸುತ್ತಿದ್ದ ಲಾರಿಯನ್ನು ರಾಮನಗರ ತಾಲ್ಲೂಕಿನ ಹೊಸದೊಡ್ಡಿ ಗ್ರಾಮಸ್ಥರು ಸಂಜೆ ತಡೆದು ಪ್ರತಿಭಟನೆ ನಡೆಸಿದರು.
ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಆನೆಗಳು ಬೀಡುಬಿಟ್ಟಿವೆ. ಈ ಭಾಗದ ಗ್ರಾಮಗಳ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿರುವ ಎಲ್ಲಾ ಕಾಡಾನೆಗಳನ್ನು ಸೆರೆ ಹಿಡಿಯಬೇಕು ಎಂದು ಆಗ್ರಹಿಸಿದರು.


ಕಾಡಾನೆಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ 2 ಕಾಡಾನೆ ಸೆರೆಗೆ ಅರಣ್ಯ ಇಲಾಖೆ ಅನುಮತಿ ಪಡೆದಿದೆ. ಎರಡರಿಂದ ಮಾತ್ರ ಸಮಸ್ಯೆ ಬಗೆಹರಿಯುವುದಿಲ್ಲ. ಹಾಗಾಗಿ ಎಲ್ಲಾ ಕಾಡಾನೆಗಳು ಸೆರೆ ಹಿಡಿಯುವ ಮೂಲಕ ಹಾವಳಿ ತಪ್ಪಿಸಬೇಕು ಎಂದು ಒತ್ತಾಯಿಸಿದರು.


ವಿಷಯ ತಿಳಿದು ಸ್ಥಳಕ್ಕೆ ಬಂದ ಅರಣ್ಯ ಇಲಾಖೆಯ ಹಿರಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಇತರೆ ಕಾಡಾನೆಗಳ ಸೆರೆಗೆ ಸರ್ಕಾರದ ಅನುಮತಿ ಪಡೆದು ಸೆರೆ ಕಾರ್ಯಾಚರಣೆ ನಡೆಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ಗ್ರಾಮಸ್ಥರು ಪ್ರತಿಭಟನೆ ಕೈ ಬಿಟ್ಟರು.
ಕೆಂಪಿಕಟ್ಟೆ ಕೆರೆ ಬಳಿ ಮಕ್ನಾ ಆನೆ ಸೆರೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಅರಣ್ಯ ಇಲಾಖೆ ತಂಡ ರಾಮನಗರ ತಾಲ್ಲೂಕಿನ ಹೊಸದೊಡ್ಡಿ ಗ್ರಾಮದಲ್ಲಿ ಕಾಡಾನೆ ಸಾಗಿಸುತ್ತಿದ್ದ ಲಾರಿ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು