ಇತ್ತೀಚಿನ ಸುದ್ದಿ
ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು ಮಹತ್ವದ ಚರ್ಚೆ
03/03/2026, 19:53
ದಾವಣಗೆರೆ(reporterkarnataka.com); ಚೆನ್ನೈ ನ ಐಟಿಸಿ ಗ್ರ್ಯಾಂಡ್ ಚೋಳಾ ಹೋಟೆಲ್ನಲ್ಲಿ ಆಯೋಜಿಸಿದ್ದ ದಿ ಥಿಂಕ್ಎಡು ಕಾನ್ಕ್ಲೇವ್ 2026 ಸಮಾವೇಶದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಣೆಯ ಮಹತ್ವವನ್ನು ಕೇಂದ್ರವಾಗಿಟ್ಟುಕೊಂಡು ವಿಶೇಷ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವುದು, ತಡೆಗಟ್ಟುವ ವೈದ್ಯಕೀಯ ಕ್ರಮಗಳ ಅಗತ್ಯತೆ, ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆ, ಶಿಕ್ಷಣ ಮತ್ತು ಆರೋಗ್ಯ ನಡುವಿನ ಸಂಬಂಧ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಅರ್ಥಪೂರ್ಣ ಮತ್ತು ಸಮಗ್ರ ಚರ್ಚೆಗಳು ನಡೆದವು.


ಕಾರ್ಯಕ್ರಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ, ಆರೋಗ್ಯ ಕ್ಷೇತ್ರದ ಪ್ರಗತಿ, ಜನಕೇಂದ್ರಿತ ನೀತಿಗಳ ಅವಶ್ಯಕತೆ ಹಾಗೂ ಭವಿಷ್ಯದ ಆರೋಗ್ಯ ಭದ್ರತೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವುದು, ತಡೆಗಟ್ಟುವ ಆರೋಗ್ಯ ಕ್ರಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಹಾಗೂ ಸಮಗ್ರ ಆರೋಗ್ಯ ಸೇವೆಗಳನ್ನು ಎಲ್ಲ ವರ್ಗಗಳಿಗೂ ತಲುಪಿಸುವುದು ಕಾಲದ ಅವಶ್ಯಕತೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಗಣ್ಯರು, ತಜ್ಞರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಈ ಸಮಾವೇಶ ಅರ್ಥಪೂರ್ಣವಾಗಿ ಜರುಗಿತು.













