8:52 AM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ

04/03/2026, 14:53

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದುರ್ದೈವಿ. ಮನೆಯಲ್ಲಿ ತೋಟದ ಕೆಲಸಕ್ಕೆ ಎಂದು ತಂದು ಇಡಲಾಗಿದ್ದ ಪೆಟ್ರೋಲ್ ಸೋರಿಕೆಯಾಗಿದ್ದು, ಆಕಸ್ಮಿಕ ಬೆಂಕಿ ತಗುಲಿಕೊಂಡಿದ್ದು, ಗಂಗ್ರಿನ್ ನಿಂದ ಒಂದು ಕಾಲನ್ನು ಕಳೆದುಕೊಂಡಿದ್ದ ವೆಂಕಟೇಶ್ ಆಕಸ್ಮಿಕ ಬೆಂಕಿ ಇಂದ ಮನೆಯಿಂದ ಹೊರ ಬರಲು ಸಾಧ್ಯವಾಗದೆ ತೀವ್ರ ಸ್ವರೂಪದ ಗಾಯಗಳಿಂದ ಮೃತಪಟ್ಟಿದ್ದಾರೆ. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಹಾಯಕ್ಕೆ ಯಾರೂ ಇರಲಿಲ್ಲ ಎನ್ನಲಾಗಿದ್ದು, ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಗಮನಿಸಿ ಸ್ಥಳಕ್ಕೆ ಅಗ್ನಿ ಶಾಮಕ ದಳ ಬರುವಷ್ಟರಲ್ಲಿ ವೆಂಕಟೇಶ್ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು