ಇತ್ತೀಚಿನ ಸುದ್ದಿ
ಸೋಮವಾರಪೇಟೆ | ಆಕಸ್ಮಿಕ ಬೆಂಕಿ ಅವಘಡ: ಮಾಜಿ ಯೋಧ ದುರ್ಮರಣ
04/03/2026, 14:53
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಸೋಮವಾರಪೇಟೆ ತಾಲ್ಲೂಕಿನ ತೊಳೂರು ಶೆಟ್ಟಳ್ಳಿಯಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಮಾಜಿ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತೊಳೂರು ಶೆಟ್ಟಳ್ಳಿ ಜಂಕ್ಷನ್ ನಿವಾಸಿ ಹೆಚ್. ಎ ವೆಂಕಟೇಶ್ (64) ಮೃತ ದುರ್ದೈವಿ. ಮನೆಯಲ್ಲಿ ತೋಟದ ಕೆಲಸಕ್ಕೆ ಎಂದು ತಂದು ಇಡಲಾಗಿದ್ದ ಪೆಟ್ರೋಲ್ ಸೋರಿಕೆಯಾಗಿದ್ದು, ಆಕಸ್ಮಿಕ ಬೆಂಕಿ ತಗುಲಿಕೊಂಡಿದ್ದು, ಗಂಗ್ರಿನ್ ನಿಂದ ಒಂದು ಕಾಲನ್ನು ಕಳೆದುಕೊಂಡಿದ್ದ ವೆಂಕಟೇಶ್ ಆಕಸ್ಮಿಕ ಬೆಂಕಿ ಇಂದ ಮನೆಯಿಂದ ಹೊರ ಬರಲು ಸಾಧ್ಯವಾಗದೆ ತೀವ್ರ ಸ್ವರೂಪದ ಗಾಯಗಳಿಂದ ಮೃತಪಟ್ಟಿದ್ದಾರೆ. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಸಹಾಯಕ್ಕೆ ಯಾರೂ ಇರಲಿಲ್ಲ ಎನ್ನಲಾಗಿದ್ದು, ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸುಟ್ಟು ಕರಕಲಾಗಿದೆ. ಬೆಂಕಿಯನ್ನು ಗಮನಿಸಿ ಸ್ಥಳಕ್ಕೆ ಅಗ್ನಿ ಶಾಮಕ ದಳ ಬರುವಷ್ಟರಲ್ಲಿ ವೆಂಕಟೇಶ್ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












