ಇತ್ತೀಚಿನ ಸುದ್ದಿ
ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು
05/03/2026, 19:33
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಶಿರಸಿ-ಯಲ್ಲಾಪುರ ರಸ್ತೆಯ ಬೇಡ್ತಿ ಸಮೀಪದ ಮಳಲಗಾವ್ ನಲ್ಲಿ ಕರ್ನಾಟಕ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಚಾಲಕ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮಂಗಳೂರಿನಲ್ಲಿ ಮ್ಯಾಕ್ಸ್ ಇನ್ಫಾಟೆಸ್ ಹಾಗೂ ಇನ್ನಿತರ ಸಂಸ್ಥೆ ನಡೆಸುತ್ತಿದ್ದ ಮುಕೇಶ್ ಶೆಟ್ಟಿ (44) ಸಾವನ್ನಪ್ಪಿದ ದುರ್ದೈವಿ. ಮುಕೇಶ್ ಶೆಟ್ಟಿ ಕರ್ತವ್ಯ ನಿಮಿತ್ತ ಮಂಗಳೂರಿನಿಂದ ಶಿರಸಿ ಕಡೆ ತೆರಳುತ್ತಿದ್ದ ವೇಳೆ ಬೆಳಗಾವಿಯಲ್ಲಿ ಮದುವೆಗೆಂದು ಒಪ್ಪಂದದ ಮೇರೆಗೆ ತೆರಳುತ್ತಿದ್ದ ಸಾರಿಗೆ ಬಸ್ ಗೆ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಮುಕೇಶ್ ಶೆಟ್ಟಿ ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಸ್ಥಳೀಯರ ಸಹಾಯದಿಂದ ಮಂಗಳೂರಿಗೆ ರವನಿಸಲಾಗಿತ್ತು. ಇತ್ತ ಬಸ್ ನಲ್ಲಿದ್ದಾವ್ರಿಗೂ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಶಿರಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













