12:18 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ

06/03/2026, 11:50

ಬೆಂಗಳೂರು(reporterkarnataka.com): ಕರ್ನಾಟಕ ಬಜೆಟ್‌ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಮೂಲಕ ಕಾನೂನು ಸುವ್ಯವಸ್ಥೆಗೆ ಮುಂದಾಗಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ.

ಕ್ರ.ಸಂ. ಜಿಲ್ಲೆ ಪೊಲೀಸ್ ಠಾಣೆ
1 ದಕ್ಷಿಣ ಕನ್ನಡ: ಮಾಣಿ ಪೊಲೀಸ್ ಠಾಣೆ
2 ದಕ್ಷಿಣ ಕನ್ನಡ: ಸಜಿಪನಡು ಪೊಲೀಸ್ ಠಾಣೆ
3 ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4 ಬೆಳಗಾವಿ: ಯರಗಟ್ಟಿ ಪೊಲೀಸ್ ಠಾಣೆ
5 ಯಾದಗಿರಿ : ಕಕ್ಕೇರಾ ಪೊಲೀಸ್ ಠಾಣೆ
6 ಚಿತ್ರದುರ್ಗ: ಹಿರಿಯೂರು ಸಂಚಾರ ಪೊಲೀಸ್ ಠಾಣೆ
7 ದಾವಣಗೆರೆ: ಆನಗೋಡು ಪೊಲೀಸ್ ಠಾಣೆ
8 ಹಾವೇರಿ: ತಿಳುವಳ್ಳಿ ಪೊಲೀಸ್ ಠಾಣೆ
9 ಮೈಸೂರು: ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10 ವಿಜಯಪುರ: ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11 ಕೋಲಾರ: ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ
12 ಚಾಮರಾಜನಗರ: ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

*ಬಜೆಟ್‌ 2026ರಲ್ಲಿ ಗೃಹ ಹಾಗೂ ಒಳ ಆಡಳಿತ ಇಲಾಖೆಗೆ ಸಿಕ್ಕಿದ್ದೇನು:?*

ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8,000 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ.
ಸಿಬ್ಬಂದಿಗಳ ವಸತಿಗಾಗಿ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿ ಆರಂಭ. ಸುವರ್ಣ ಸೌಧದ ಬಂದೋಬಸ್ತ್ ಸಿಬ್ಬಂದಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ 1,000 ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಶ್ವತ ಬ್ಯಾರಕ್‌ಗಳ ನಿರ್ಮಾಣ.
ಸಂಚಾರ ದಟ್ಟಣೆ ನಿಯಂತ್ರಿಸಲು 25 ಕೋಟಿ ರೂ. ವೆಚ್ಚದಲ್ಲಿ ‘ಸಂಯೋಜಿತ ಡಿಜಿಟಲ್ ವೇದಿಕೆ’ಯನ್ನು ರೂಪಿಸಲಾಗುತ್ತದೆ.
ನಗರ ಪೊಲೀಸಿಂಗ್ ಸವಾಲುಗಳನ್ನು ಎದುರಿಸಲು ಬೆಂಗಳೂರಿನಲ್ಲಿ ಈ ನಾವೀನ್ಯತೆ ಕೇಂದ್ರವನ್ನು ಸ್ಥಾಪನೆ.
ಪೊಲೀಸ್ ಆಧುನೀಕರಣ ಯೋಜನೆಯಡಿ ಸಿಸಿಟಿವಿ, ಬಾಡಿ ವರ್ನ್ ಕ್ಯಾಮೆರಾ, ಡ್ರೋನ್ ಮುಂತಾದವುಗಳಿಗಾಗಿ ಒಟ್ಟು 354 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗಿದೆ.
ಗೃಹ ಇಲಾಖೆಯ ಚಲನಶೀಲತೆ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳನ್ನು ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು