10:55 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ

11/09/2021, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರ‍ಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಗ್ರಹಿಸಿದ್ದಾರೆ. 

ಅವರು ಕೂಡ್ಲಿಗಿ ಘಟಕದ ಅಧಿಕಾರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ.

ಬಂಡೇ ಬಸಾಪುರ ತಾಂಡ ತಾಲೂಕು ಕೇಂದ್ರದಿಂದ ಸುಮಾರು 5 ಕಿಮೀ ದೂರದಲ್ಲಿದೆ. ಕೋವಿಡ್ ಸಂದರ್ಭ ಹೊರತುಪಡಿಸಿದಂತೆ ಬಸ್ ಸಂಪರ್ಕ ಗ್ರಾಮಕ್ಕೆ ಈವರೆಗೂ ಇತ್ತು, ಕೋವಿಡ್ ಲ‍ಾಕ್ ಡೌನ್ ನಿಂದಾಗಿ ರದ್ದಾಗಿದೆ. ನಂತರದ ದಿನಗಳಲ್ಲಿ ಮತ್ತೆ ಬಸ್ ಕಲ್ಪಿಸಿಲ್ಲ, ಇದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಮಕ್ಕಳು ಹಾಗೂ ಗರ್ಭಿಣಿಯರಿಗೆ, ರೈತರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಬಸ್ ಸೌಲಭ್ಯ ಅನಿವಾರ್ಯವಾಗಿದೆ. ಕಾರಣ ಗ್ರಾಮಕ್ಕೆ  ಶೀಘ್ರವಾಗಿ ಬಸ್ ಸೌಕರ್ಯ ಕಲ್ಪಿಸಬೇಕೆಂದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸಂಸ್ಥೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಕ.ರಾ.ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಂ.ಬಸವರಾಜ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ,ರೈತ ಮುಖಂಡರಾದ ಜಂಗಮ ಸೋವೇನಹಳ್ಳಿ ನಂದಿ ಜಂಬಣ್ಣ,  ಕೈವಲ್ಯಾಪುರ ವಿ.ನಾಗರಾಜ,ಬಿಬಿ ತಾಂಡದವರಾದಎಸ್.ಭಾಷಸಾಬ್,ಪಾಂಡುರಂಗನಾಯ್ಕ,ನಾರಾಯಣ ನಾಯ್ಕ, ನೇಮಿರಾಜನಾಯ್ಕ,ಕೆ.ನಿರಂಜನ,ಪಿ.ಭಾಷಾ ಸೇರಿದಂತೆ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು