6:05 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ

11/09/2021, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರ‍ಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಗ್ರಹಿಸಿದ್ದಾರೆ. 

ಅವರು ಕೂಡ್ಲಿಗಿ ಘಟಕದ ಅಧಿಕಾರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ.

ಬಂಡೇ ಬಸಾಪುರ ತಾಂಡ ತಾಲೂಕು ಕೇಂದ್ರದಿಂದ ಸುಮಾರು 5 ಕಿಮೀ ದೂರದಲ್ಲಿದೆ. ಕೋವಿಡ್ ಸಂದರ್ಭ ಹೊರತುಪಡಿಸಿದಂತೆ ಬಸ್ ಸಂಪರ್ಕ ಗ್ರಾಮಕ್ಕೆ ಈವರೆಗೂ ಇತ್ತು, ಕೋವಿಡ್ ಲ‍ಾಕ್ ಡೌನ್ ನಿಂದಾಗಿ ರದ್ದಾಗಿದೆ. ನಂತರದ ದಿನಗಳಲ್ಲಿ ಮತ್ತೆ ಬಸ್ ಕಲ್ಪಿಸಿಲ್ಲ, ಇದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಮಕ್ಕಳು ಹಾಗೂ ಗರ್ಭಿಣಿಯರಿಗೆ, ರೈತರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಬಸ್ ಸೌಲಭ್ಯ ಅನಿವಾರ್ಯವಾಗಿದೆ. ಕಾರಣ ಗ್ರಾಮಕ್ಕೆ  ಶೀಘ್ರವಾಗಿ ಬಸ್ ಸೌಕರ್ಯ ಕಲ್ಪಿಸಬೇಕೆಂದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸಂಸ್ಥೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಕ.ರಾ.ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಂ.ಬಸವರಾಜ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ,ರೈತ ಮುಖಂಡರಾದ ಜಂಗಮ ಸೋವೇನಹಳ್ಳಿ ನಂದಿ ಜಂಬಣ್ಣ,  ಕೈವಲ್ಯಾಪುರ ವಿ.ನಾಗರಾಜ,ಬಿಬಿ ತಾಂಡದವರಾದಎಸ್.ಭಾಷಸಾಬ್,ಪಾಂಡುರಂಗನಾಯ್ಕ,ನಾರಾಯಣ ನಾಯ್ಕ, ನೇಮಿರಾಜನಾಯ್ಕ,ಕೆ.ನಿರಂಜನ,ಪಿ.ಭಾಷಾ ಸೇರಿದಂತೆ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು