ಇತ್ತೀಚಿನ ಸುದ್ದಿ
ಮಧ್ಯಪ್ರಾಚ್ಯ ಯುದ್ಧ ಬಿಕ್ಕಟ್ಟು: ಕನ್ನಡಿಗರ ರಕ್ಷಣೆಗೆ ವಿದೇಶಾoಗ ಸಚಿವರ ಭೇಟಿ ಮಾಡಿದ ಕೋಟ ಶ್ರೀನಿವಾಸ್ ಪೂಜಾರಿ
10/03/2026, 16:55
ನವದೆಹಲಿ(reporterkarnataka.com): ಬೆಹರೈನ್, ಕತಾರ್, ದುಬೈ ಮುಂತಾದ ಗಲ್ಫ್ ರಾಷ್ಟ್ರಗಳ ಕನ್ನಡಿಗರ ಮನವಿಯಂತೆ, ಯುದ್ದ ಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಬಗ್ಗೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅವರನ್ನು ಸಂಸದ ಡಾ. ಮಂಜುನಾಥ ಅವರ ಜತೆ ಪಾರ್ಲಿಮೆಂಟಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಜೈ ಶಂಕರಂತಹ ಪ್ರತಿಭಾವಂತ ಮಂತ್ರಿ ಭಾರತೀಯರ ರಕ್ಷಣೆಗೆ ಶ್ರಮಿಸುತ್ತಿರುವುದು ಅರ್ಥವಾಯ್ತು. ಆ ಪ್ರದೇಶದ ವಿಮಾನ ನಿಲ್ದಾಣದ ಮೇಲೆ ದಾಳಿಯಾಗುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಪ್ರಯತ್ನಗಳಾಗುತ್ತಿವೆ, ಆತಂಕ ಬೇಡ ಎಂದು ಭರವಸೆ ನೀಡಿದ್ದಾರೆ. ಮತ್ತು ಯಾವುದೇ ಹಂತದಲ್ಲೂ ಸಮಸ್ತ ಭಾರತೀಯರ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು.












