1:49 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ: ವಿಧಾನ ಪರಿಷತ್ ನಲ್ಲಿ ಸಚಿವ ಈಶ್ವರ ಖಂಡ್ರೆ

10/03/2026, 20:00

ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು: ಈಶ್ವರ ಖಂಡ್ರೆ

ಬೆಂಗಳೂರು(reporterkarnataka.com): ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲು ಹಳಿ ತಡೆಗೋಡೆ ಮಂಜೂರಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ವಿಧಾನ ಪರಿಷತ್ತಿಗಿಂದು ತಿಳಿಸಿದ್ದಾರೆ.

ಶೂನ್ಯವೇಳೆಯಲ್ಲಿ ಸುಜಾ ಕುಶಾಲಪ್ಪ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಫೆ.28ರಂದು ಕಾಡಿನಂಚಿನ ನಿವಾಸಿ 17 ವರ್ಷದ ಬಾಲಕಿ ಆನೆ ದಾಳಿಯಿಂದ ಮೃತಪಟ್ಟಿದ್ದರೆ, ಮಾ.9ರಂದು ಕಾಡಿನೊಳಗೇ ವಾಸಿಸುತ್ತಿದ್ದ 55 ವರ್ಷದ ಬುಡಕಟ್ಟು ಮಹಿಳೆ ಸಾವಿಗೀಡಾಗಿದ್ದಾರೆ ಇದು ಅತ್ಯಂತ ನೋವಿನ ಸಂಗತಿ ಎಂದರು.
ಜೀವ ಅತ್ಯಂತ ಅಮೂಲ್ಯವಾದ್ದು, ಇದಕ್ಕೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ. ಅರಣ್ಯ ಇಲಾಖೆ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆನೆ ನಿಗ್ರಹ ಕಂದಕ, ಸೌರ ವಿದ್ಯುತ್ ಬೇಲಿ ನಿರ್ವಹಣೆ ಮಾಡಲಾಗುತ್ತಿದೆ. 2 ಆನೆ ಕಾರ್ಯಪಡೆ ಕಾರ್ಯನಿರ್ವಹಿಸುತ್ತಿದೆ. ಈಗ 2 ಪುಂಡಾನೆಗಳ ಸೆರೆಗೆ ಮುಖ್ಯ ವನ್ಯಜೀವಿ ಪರಿಪಾಲಕರು ಆದೇಶ ನೀಡಿದ್ದಾರೆ ಎಂದು ತಿಳಿಸಿದರು.
ಈ ಎರಡೂ ಪ್ರಕರಣದಲ್ಲಿ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮೃತರ ಹತ್ತಿರದ ಬಂಧುಗಳಿಗೆ ವಿತರಿಸಲಾಗಿದ್ದು, ವಾರದೊಳಗೆ ಉಳಿಕೆ ತಲಾ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಆನೆ-ಮಾನವ ಸಂಘರ್ಷ ನಿಯಂತ್ರಿಸಲು ಶಾಶ್ವತ ಪರಿಹಾರ ಕ್ರಮಗಳ ಬಗ್ಗೆಯೂ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು