10:22 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ

12/03/2026, 20:55

ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ಪಶ್ಚಾತ್ತಾಪ, ಪ್ರಾಯಶ್ಚಿತ, ತ್ಯಾಗ ಮತ್ತು ಶಿಲುಬೆಯ ಹಾದಿಯ ಮೇಲೆ ಕೇಂದ್ರೀಕರಿಸಿವೆ. 40 ದಿನಗಳ ಅವಧಿಯ ತಪಸ್ಸು ಕಾಲದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ.
ಕ್ರಿಸ್ತ ಶಕ 4ನೇ ಶತಮಾನದಿಂದ ಅಂದರೆ ಕ್ರಿ.ಶ. 325ರಿಂದ ತಪಸ್ಸು ಕಾಲ ಅಧಿಕೃತವಾಗಿ ಆರಂಭವಾಯಿತು ಎಂಬುದಾಗಿ ಇತಿಹಾಸದ ಪುಟಗಳಿದ ತಿಳಿದು ಬರುತ್ತದೆ. ಅಂದಿನಿಂದಲೇ ಇದಕ್ಕೆ ಸಂಬಂಧಿಸಿದ ವಿಶೇಷ ಭಕ್ತಿ ಗೀತೆಗಳ ಗಾಯನ ಪದ್ದತಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಗಮನದಲ್ಲಿ ಇರಿಸಿ ಮಾರ್ಚ್ 15ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್, ವಾಮಂಜೂರಿನ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ಮತ್ತು ಕೆಲರಾಯ್ ಸಂತ ಅನ್ನಾ ಚರ್ಚ್ ನ ಸಹಯೋಗದಲ್ಲಿ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂಜೆ 6 ಗಂಟೆಗೆ ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್ ಎಂಬ ತಪಸ್ಸು ಕಾಲದ ಕೊಂಕಣಿ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಮೂರು ಚರ್ಚ್ ಗಳ ಗಾಯನ ಮಂಡಳಿಗಳ ಸದಸ್ಯರು ತಲಾ ನಾಲ್ಕು ಗೀತೆಗಳನ್ನು ಅವುಗಳ ವಿವರಣೆಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು