7:34 PM Monday25 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್: ಪಾಲ್ದನೆ ಚರ್ಚ್ ನಲ್ಲಿ ತಪಸ್ಸು ಕಾಲದ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮ

12/03/2026, 20:55

ಮಂಗಳೂರು(reporterkarnataka.com): ತಪಸ್ಸು ಕಾಲವು ಕ್ರೈಸ್ತರಲ್ಲಿ ಪ್ರಾರ್ಥನೆ, ಪಶ್ಚಾತ್ತಾಪ ಮತ್ತು ತ್ಯಾಗದ ಸಮಯವಾಗಿದ್ದು, ಈ ಸಮಯದಲ್ಲಿ ಯೇಸು ಕ್ರಿಸ್ತರ ಶಿಲುಬೆಯ ಮರಣ ಮತ್ತು ಪ್ರೀತಿಯನ್ನು ಸ್ಮರಿಸುವ ಗೀತೆಗಳನ್ನು ಹಾಡಲಾಗುತ್ತದೆ. ಸಾಂಪ್ರದಾಯಿಕ ಮತ್ತು ಸಮಕಾಲೀನ ಕ್ಯಾಥೊಲಿಕ್ ಭಕ್ತಿ ಗೀತೆಗಳು ಪಶ್ಚಾತ್ತಾಪ, ಪ್ರಾಯಶ್ಚಿತ, ತ್ಯಾಗ ಮತ್ತು ಶಿಲುಬೆಯ ಹಾದಿಯ ಮೇಲೆ ಕೇಂದ್ರೀಕರಿಸಿವೆ. 40 ದಿನಗಳ ಅವಧಿಯ ತಪಸ್ಸು ಕಾಲದ ಆಚರಣೆಗೆ ಹಲವಾರು ವರ್ಷಗಳ ಇತಿಹಾಸವಿದೆ.
ಕ್ರಿಸ್ತ ಶಕ 4ನೇ ಶತಮಾನದಿಂದ ಅಂದರೆ ಕ್ರಿ.ಶ. 325ರಿಂದ ತಪಸ್ಸು ಕಾಲ ಅಧಿಕೃತವಾಗಿ ಆರಂಭವಾಯಿತು ಎಂಬುದಾಗಿ ಇತಿಹಾಸದ ಪುಟಗಳಿದ ತಿಳಿದು ಬರುತ್ತದೆ. ಅಂದಿನಿಂದಲೇ ಇದಕ್ಕೆ ಸಂಬಂಧಿಸಿದ ವಿಶೇಷ ಭಕ್ತಿ ಗೀತೆಗಳ ಗಾಯನ ಪದ್ದತಿ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆ.
ಇದನ್ನು ಗಮನದಲ್ಲಿ ಇರಿಸಿ ಮಾರ್ಚ್ 15ರಂದು ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್, ವಾಮಂಜೂರಿನ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್ ಮತ್ತು ಕೆಲರಾಯ್ ಸಂತ ಅನ್ನಾ ಚರ್ಚ್ ನ ಸಹಯೋಗದಲ್ಲಿ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂಜೆ 6 ಗಂಟೆಗೆ ಕರೆಜ್ಮಾಚಾ ಗಿತಾಂಚಿ ಭಕ್ತಿಕ್ ಸಾಂಜ್ ಎಂಬ ತಪಸ್ಸು ಕಾಲದ ಕೊಂಕಣಿ ಭಕ್ತಿ ಗೀತೆಗಳ ಗಾಯನ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಮೂರು ಚರ್ಚ್ ಗಳ ಗಾಯನ ಮಂಡಳಿಗಳ ಸದಸ್ಯರು ತಲಾ ನಾಲ್ಕು ಗೀತೆಗಳನ್ನು ಅವುಗಳ ವಿವರಣೆಯೊಂದಿಗೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಚರ್ಚ್ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು