8:24 PM Friday13 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ. ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

13/03/2026, 19:06

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಕೆ.ಸಿ. ರೋಡ್ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ.ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಅವರ ಅಧ್ಯಕ್ಷತೆಯಲ್ಲಿ ಕೆ.ಸಿ. ರೋಡ್ ಶಾಖೆಯಲ್ಲಿ ಜರುಗಿತು.
ಸಂಘದ ಸದಸ್ಯರುಗಳಾದ ಶ್ರೀ ಎಚ್. ಸೀತಾರಾಮ ರೈ, ಶ್ರೀ ರಾಮಕೃಷ್ಣ, ಶ್ರೀ ಸೈಯ್ಯದ್ ಅಹಮ್ಮದ್ ಬಾವ, ಶ್ರೀ ಚಂದ್ರಶೇಖರ್, ಶ್ರೀಮತಿ ಎಚ್. ಅಶ್ವಿತಾ ಹಾಗೂ ಶ್ರೀಮತಿ ಜಯಂತಿ ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಅವರು ಮಾತನಾಡಿ, “ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ಗ್ರಾಹಕರ ಸಹಕಾರದಿಂದ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಹಾಗೂ ಆಭರಣ ಸಾಲವನ್ನು ನೀಡಲಾಗಿದೆ. ಶಾಖೆಯ ವಾರ್ಷಿಕೋತ್ಸವದ ಪ್ರಯುಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 7.50, 500 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.00 ಹಾಗೂ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50 ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. 12,000/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ. ಎಲ್ಲಾ ಗ್ರಾಹಕರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಮುಂದಿನ ಏಪ್ರಿಲ್ ತಿಂಗಳಲ್ಲಿ ಕೆ.ಸಿ ರೋಡ್ ಶಾಖೆಯಲ್ಲಿ ವ್ಯವಸ್ಥಿತವಾಗಿ ಆರೋಗ್ಯ ಶಿಬಿರವನ್ನು ಆಯೋಜನೆ ಮಾಡಲಾಗುವುದು. ಎಲ್ಲಾ ಸಂಘದ ಗ್ರಾಹಕರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆಯುವಂತೆ ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಸದಸ್ಯರಾದ ಶ್ರೀ ಎಚ್ ಸೀತಾರಾಮ ರೈ ಅವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿಗಳು ಗ್ರಾಹಕ ಸ್ನೇಹಿ ನಗುಮುಖದ ಸೇವೆಯನ್ನು ನೀಡುತ್ತಿದ್ದಾರೆ ಎಂದು ಸಂಘದ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸದಸ್ಯರಾದ ಶ್ರೀಮತಿ ಎಚ್. ಅಶ್ವಿತಾ ರವರು ಮಾತನಾಡಿ “ಸಿಬ್ಬಂದಿಗಳು ಗ್ರಾಹಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಸಂಘದಲ್ಲಿ ಲಭ್ಯವಿರುವ ಎಲ್ಲಾ ಸೇವೆಗಳ ಬಗ್ಗೆ ಉತ್ತಮ ರೀತಿಯಲ್ಲಿ ಮಾಹಿತಿ ನೀಡುತ್ತಾ ಇದ್ದಾರೆ” ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ , “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಉತ್ತಮ ಪ್ರಗತಿಯನ್ನು ಹೊಂದಲು ಸಾಧ್ಯವಾಗಿದೆ. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು.
ಮುಂದಿನ ದಿನಗಳಲ್ಲಿ ಜಪ್ಪು ಮಾರ್ಕೆಟ್ ಮತ್ತು ಮೂಡಬಿದ್ರೆಯಲ್ಲಿ ಹೊಸ ಶಾಖೆ ತೆರೆಯುವ ಯೋಜನೆಯನ್ನು ತಿಳಿಸಿ, ಇನ್ನೂ ಮುಂದೆಯು ಇದೇ ರೀತಿ ನಿಮ್ಮ ಸಹಕಾರವಿರಲಿ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಶ್ರೀ ಆನಂದ್ ಎಸ್. ಕೊಂಡಾಣ ಮತ್ತು ಶ್ರೀ ಗೋಪಾಲ್ ಎಮ್. ಅವರು ಉಪಸ್ಥಿತಿರಿದ್ದರು.
ಶಾಖೆಯ ಸಿಬ್ಬಂದಿಯಾದ ಕುಮಾರಿ ರತಿಕಾ ರವರು ಸ್ವಾಗತಿಸಿ, ಸಿಬ್ಬಂದಿಯಾದ ಶ್ರೀ ವಿಶಾಲ್ ಕುಮಾರ್ ಸುವರ್ಣ ರವರು ವಂದಿಸಿದರು. ಶಾಖೆಯ ಶಾಖಾಧಿಕಾರಿಯಾದ ಶ್ರೀ ಶಿವರಾಮ ಅವರು ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು