3:17 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಮುಖಂಡೆ!

17/03/2026, 23:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಮುಖಂಡನೊಬ್ಬನ ವಿರುದ್ಧ ಕೈ ಮುಖಂಡೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಚೇತನಾ ಎಂಬ ಕಾಂಗ್ರೆಸ್ ಮುಖಂಡೆ
ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಷರೀಫ್ ವಿರುದ್ಧ ದೂರು ನೀಡಿದ್ದಾರೆ.
ರಾಹಿಲ್ ಷರೀಫ್ ಚೇತನಾ ಮನೆ ಬಳಿ ಹೋಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ
ಇದರಿಂದ ತನ್ನ ಗಂಡನ ಕೈಗೆ ಗಾಯವಾಗಿದೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಹಿಲ್ ಷರೀಫ್ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆ ಜೊತೆಗಿದ್ದ ಪೋಟೋ ವೈರಲ್ ಆಗಿತ್ತು. ಆ ಅಪಾರ್ಟ್ಮೆಂಟ್ ಚೇತನಾಳದ್ದಾಗಿದ್ದು, ಇದೇ ಷರೀಫ್ ಅವರಿಂದ ಬಾಡಿಗೆ ಪಡೆದುಕೊಂಡಿದ್ದ. ಅನ್ಯ ಕೋಮಿನ ಮಹಿಳೆ ಜೊತೆ ಅದೇ ಅಪಾರ್ಟ್‌ಮೆಂಟ್ ನಲ್ಲಿದ್ದ ಫೋಟೋ ವೈರಲ್ ಆಗಿತ್ತು. ಚೇತನಾ ಅವರೇ ಫೋಟೋ ವೈರಲ್ ಮಾಡಿರೋದು ಎಂದು ಮನೆ ಬಳಿ ಹೋಗಿ ರಾಹಿಲ್ ಮಚ್ಚು ಬೀಸಿದ್ದಾನೆ.
ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಇದೀಗ ನ್ಯಾಯಕ್ಕಾಗಿ ಪ್ರಧಾನಿ ಅವರಿಗೆ ಚೇತನಾ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸಚಿವಾಲಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೇರಿ ಹಲವರಿಗೆ ಪತ್ರ ಬರೆದಿದ್ದಾರೆ. ಆತನ ಮೊಬೈಲ್ ನಲ್ಲಿ ಹೆಣ್ಣು ಮಕ್ಕಳ ಜೊತೆಗಿರೋ ಫೋಟೋಗಳಿವೆ.
ಹೆಣ್ಣು ಮಕ್ಕಳ ಫೋಟೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲೆ ಮಾಡುತ್ತಾನೆ ಎಂದು ದೂರು ಕೇಳಿ ಬಂದಿದೆ.
ಆತ ಎಲ್ಲರಿಂದ ರಕ್ಷಣೆಗೆ ಒಳಗಾಗಿದ್ದಾನೆ, ಯಾವುದೇ ಕ್ರಮವಾಗುತ್ತಿಲ್ಲ ಎಂದು ತಿಳಿಸಲಾಗಿದೆ.
ತಿಂಗಳ ಅಂತರದಲ್ಲಿ 2 ಬಾರಿ ರಾಹಿಲ್ ಗಲಾಟೆ ಮಾಡಿದ್ದಾನೆ.
ಸದ್ಯ ಈ ಎಲ್ಲಾ ಬೆಳವಣಿಗೆ ಮಧ್ಯೆ ರಾಹಿಲ್ ಷರೀಫ್ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಆಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು