11:17 PM Tuesday17 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ ಕಾಂಗ್ರೆಸ್ ಮುಖಂಡೆ!

17/03/2026, 23:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಮುಖಂಡನೊಬ್ಬನ ವಿರುದ್ಧ ಕೈ ಮುಖಂಡೆ ಪ್ರಧಾನಿ ಮೋದಿ ಅವರಿಗೆ ದೂರು ನೀಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಚೇತನಾ ಎಂಬ ಕಾಂಗ್ರೆಸ್ ಮುಖಂಡೆ
ಯೂತ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ರಾಹಿಲ್ ಷರೀಫ್ ವಿರುದ್ಧ ದೂರು ನೀಡಿದ್ದಾರೆ.
ರಾಹಿಲ್ ಷರೀಫ್ ಚೇತನಾ ಮನೆ ಬಳಿ ಹೋಗಿ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ
ಇದರಿಂದ ತನ್ನ ಗಂಡನ ಕೈಗೆ ಗಾಯವಾಗಿದೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಹಿಲ್ ಷರೀಫ್ ಅಪಾರ್ಟ್ ಮೆಂಟ್ ನಲ್ಲಿ ಮಹಿಳೆ ಜೊತೆಗಿದ್ದ ಪೋಟೋ ವೈರಲ್ ಆಗಿತ್ತು. ಆ ಅಪಾರ್ಟ್ಮೆಂಟ್ ಚೇತನಾಳದ್ದಾಗಿದ್ದು, ಇದೇ ಷರೀಫ್ ಅವರಿಂದ ಬಾಡಿಗೆ ಪಡೆದುಕೊಂಡಿದ್ದ. ಅನ್ಯ ಕೋಮಿನ ಮಹಿಳೆ ಜೊತೆ ಅದೇ ಅಪಾರ್ಟ್‌ಮೆಂಟ್ ನಲ್ಲಿದ್ದ ಫೋಟೋ ವೈರಲ್ ಆಗಿತ್ತು. ಚೇತನಾ ಅವರೇ ಫೋಟೋ ವೈರಲ್ ಮಾಡಿರೋದು ಎಂದು ಮನೆ ಬಳಿ ಹೋಗಿ ರಾಹಿಲ್ ಮಚ್ಚು ಬೀಸಿದ್ದಾನೆ.
ದೂರು ನೀಡಿದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಇದೀಗ ನ್ಯಾಯಕ್ಕಾಗಿ ಪ್ರಧಾನಿ ಅವರಿಗೆ ಚೇತನಾ ಪತ್ರ ಬರೆದಿದ್ದಾರೆ.
ಪ್ರಧಾನಿ ಮೋದಿ, ಕೇಂದ್ರ ಸಚಿವಾಲಯ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಸೇರಿ ಹಲವರಿಗೆ ಪತ್ರ ಬರೆದಿದ್ದಾರೆ. ಆತನ ಮೊಬೈಲ್ ನಲ್ಲಿ ಹೆಣ್ಣು ಮಕ್ಕಳ ಜೊತೆಗಿರೋ ಫೋಟೋಗಳಿವೆ.
ಹೆಣ್ಣು ಮಕ್ಕಳ ಫೋಟೋಗಳನ್ನ ಇಟ್ಟುಕೊಂಡು ಬ್ಲಾಕ್ ಮೇಲೆ ಮಾಡುತ್ತಾನೆ ಎಂದು ದೂರು ಕೇಳಿ ಬಂದಿದೆ.
ಆತ ಎಲ್ಲರಿಂದ ರಕ್ಷಣೆಗೆ ಒಳಗಾಗಿದ್ದಾನೆ, ಯಾವುದೇ ಕ್ರಮವಾಗುತ್ತಿಲ್ಲ ಎಂದು ತಿಳಿಸಲಾಗಿದೆ.
ತಿಂಗಳ ಅಂತರದಲ್ಲಿ 2 ಬಾರಿ ರಾಹಿಲ್ ಗಲಾಟೆ ಮಾಡಿದ್ದಾನೆ.
ಸದ್ಯ ಈ ಎಲ್ಲಾ ಬೆಳವಣಿಗೆ ಮಧ್ಯೆ ರಾಹಿಲ್ ಷರೀಫ್ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಆಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು