12:20 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

Chikkamagaluru | ಡ್ರಂಕ್​​ ಆ್ಯಂಡ್​​ ಡ್ರೈವ್​​ ಮಾಡಿದವನಿಗೆ ಕೋರ್ಟ್​​ ಏನು ಶಿಕ್ಷೆ ನೀಡಿದೆ ನೀವೇ ನೋಡಿ!

18/03/2026, 13:59

ಚಿಕ್ಕಮಗಳೂರು(reporterkarnataka.com):ಚಿಕ್ಕಮಗಳೂರು ಕೋರ್ಟ್ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದವನಿಗೆ ವಿಶಿಷ್ಟ ಶಿಕ್ಷೆ ವಿಧಿಸಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ದ ವ್ಯಕ್ತಿಗೆ ಟ್ರಾಫಿಕ್ ರೂಲ್ಸ್ ಬೋರ್ಡ್ ಹಿಡಿದು ಸಾರ್ವಜನಿಕ ಸ್ಥಳದಲ್ಲಿ ನಿಲ್ಲುವಂತೆ ಕಡೂರು ಜೆಎಂಎಫ್ ಸಿ ನ್ಯಾಯಾಲಯ ಆದೇಶಿಸಿದೆ.

ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಹೆಚ್ಚೆಂದರೆ ದಂಡ ಹಾಕಬಹುದು ಎಂಬ ಉಡಾಫೆಯ ಮನಸ್ಥಿತಿಗೆ ತಲುಪಿರುವವರಿಗೆ ಈ ಆದೇಶ ಉತ್ತಮ ಪಾಠ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಅದೆಷ್ಟೇ ಜಾಗೃತಿ ಕೆಲಸಗಳನ್ನು ಸಂಚಾರಿ ಪೊಲೀಸರು ಮಾಡಿದರೂ ಕೆಲ ವಾಹನ ಸವಾರರು ಮಾತ್ರ ಎಚ್ಚೆತ್ತುಕೊಳ್ಳುತ್ತಿಲ್ಲ. ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ಚಾಲನೆ ಹಲವರ ಅಭ್ಯಾಸವಾಗಿಹೋಗಿದೆ. ಪೊಲೀಸರ ಕೈಗೆ ಸಿಕ್ಕಿಬಿದ್ದರೆ ಹೆಚ್ಚೆಂದರೆ ದಂಡ ಹಾಕಬಹುದು ಎಂಬ ಉಡಾಫೆಯ ಮನಸ್ಥಿತಿಗೆ ಜನ ತಲುಪುತ್ತಿದ್ದಾರೆ. ಆದರೆ ಚಿಕ್ಕಮಗಳೂರಿನಲ್ಲಿ ನಡೆದ ಪ್ರಕರಣವೊಂದು ಅಂತವರಿಗೆ ಪಾಠವಾಗುವಂತಿದೆ. ಮದ್ಯಪಾನ ಮಾಡಿ ಬೈಕ್ ಚಾಲನೆ ಮಾಡಿದ್ದ ವ್ಯಕ್ತಿಗೆ ನ್ಯಾಯಾಲಯ ಶಾಕ್​​ ಕೊಟ್ಟಿದ್ದು, ಟ್ರಾಫಿಕ್ ರೂಲ್ಸ್ ಇರುವ‌ ಬೋರ್ಡ್ ಹಿಡಿದು ನಿಲ್ಲುವಂತೆ ಆದೇಶ ಮಾಡಿದೆ.
ಹೌದು, ಕಡೂರು ತಾಲೂಕಿನ ಬಿಸಲೆಹಳ್ಳಿ ಗ್ರಾಮದ ರಂಜಿತ್ ಕುಮಾರ್ ವಿರುದ್ಧ ಮದ್ಯಪಾನ ಮಾಡಿ ಬೈಕ್​​ ಚಾಲನೆ ಮಾಡಿದ್ದ ಕೇಸ್​​ ದಾಖಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಕಡೂರು JMFC ಕೋರ್ಟ್ ನಿರೀಕ್ಷೆಗೂ ಮೀರಿದ ಆದೇಶ ನೀಡಿದ್ದು, ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ಟ್ರಾಫಿಕ್ ರೂಲ್ಸ್ ಇರುವ‌ ಬೋರ್ಡ್ ಹಿಡಿದು ರಂಜಿತ್ ಕುಮಾರ್ ರಸ್ತೆಯಲ್ಲಿ ನಿಲ್ಲಬೇಕು ಎಂದು ತಿಳಿಸಿದೆ.
ಪ್ರಕರಣ ಸಂಬಂಧ ಆರೋಪಿ ರಂಜಿತ್​​ ಕುಮಾರ್​​ ಕೂಡ ವಿಚಾರಣೆ ವೇಳೆ ತನ್ನ ತಪ್ಪು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಮರವಂಜಿ ಸರ್ಕಲ್​​/ ಮಲ್ಲೇಶ್ವರ ಸರ್ಕಲ್​​ನಲ್ಲಿ ಮಾರ್ಚ್​​ 17ರಂದು (ಇಂದು) ಬೆಳಿಗಗ್ಗೆ 10 ಗಂಟೆಯಿಂದ ಸಂಜೆ 5ರ ವರೆಗೆ ಟ್ರಾಫಿಕ್ ರೂಲ್ಸ್ ಇರುವ‌ ಬೋರ್ಡ್ ಹಿಡಿದು ರಂಜಿತ್​​ ನಿಲ್ಲಬೇಕು ಎಂದಿರುವ ಕೋರ್ಟ್​​, ಈತ ಕಮ್ಯುನಿಟಿ ಸೇವೆ ಮಾಡುತ್ತಿರುವುದನ್ನು ನೋಡಿಕೊಳ್ಳಲು ಓರ್ವ ಪೊಲೀಸ್​​ ಸಿಬ್ಬಂದಿ ನಿಯೋಜನೆಗೂ ಸೂಚಿಸಿದೆ. ಸಂಜೆ 5 ಗಂಟೆಯ ಬಳಿಕ ಕೋರ್ಟ್​​ ಸೂಚನೆಯನ್ನು ಆತ ಪಾಲಿಸಿದ್ದಾನೆಯೋ ಅಥವಾ ಇಲ್ಲವೋ ಎನ್ನುವ ಬಗ್ಗೆ ನ್ಯಾಯಾಲಯಕ್ಕೆ ವರದಿ ನೀಡುವಂತೆಯೂ ಸೂಚಿಸಿದೆ. ಕೋರ್ಟ್​​ ಆದೇಶದ ಹಿನ್ನೆಲೆ ಮರವಂಜಿ ಸರ್ಕಲ್​​ನಲ್ಲಿ ರಂಜಿತ್​​ ಬೋರ್ಡ್​​ ಹಿಡಿದು ನಿಂತಿದ್ದು, ಪೊಲೀಸ್​​ ಸಿಬ್ಬಂದಿಯನ್ನೂ ನಿಯೋಜನೆ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು