6:50 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

24 ಗಂಟೆಯಲ್ಲಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಬಣಕಲ್ ಪೊಲೀಸರು: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ

19/03/2026, 12:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯಲ್ಲಿ ನಡೆದ ಷಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದಾರೆ.
ಮಾರ್ಚ್ 17ರಂದು ಸುರೇಶ್ (54) ಅವರು ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತಮ್ಮ ಪತ್ನಿ ಕೆಲಸಕ್ಕೆ ತೆರಳಿದ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಬೋರ್ಡ್‌ನಲ್ಲಿಟ್ಟಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಪೊಲೀಸ್ ಅಧೀಕ್ಷಕರಾದ ಡಾ. ಜಿತೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಉಪಾಧೀಕ್ಷಕರ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಲಾಯಿತು.


ತನಿಖೆಯ ವೇಳೆ ಆರೋಪಿಯಾದ ಹರೀಶ್ (30)ನನ್ನು ಬಂಧಿಸಿ, ಆತನಿಂದ ಅಂದಾಜು ₹16 ಲಕ್ಷ ಮೌಲ್ಯದ 144 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿಗಳ ತ್ವರಿತ ಕಾರ್ಯಾಚರಣೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು