2:01 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಸದನದಲ್ಲಿ ಬ್ರೇಕ್ ಫಾಸ್ಟ್ ಚರ್ಚೆ: ಶಾಸಕರ ಭವನದಲ್ಲಿಯೇ ಇಡ್ಲಿ-ದೋಸೆ ಸಿಗ್ತಿಲ್ಲ ಎಂದ ಐವನ್ ಡಿಸೋಜ

19/03/2026, 14:00

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಎಲ್‌ಪಿಜಿ ಕೊರತೆಯ ಪರಿಣಾಮ ವಿಧಾನ ಪರಿಷತ್ತಿನಲ್ಲೂ ಕೇಳಿ ಬಂದಿದೆ. ಉಪಹಾರಕ್ಕೆ ಇಡ್ಲಿ, ದೋಸೆ ಸಿಗದಿರುವ ವಿಚಾರವನ್ನು ಕಾಂಗ್ರೆಸ್ ಸದಸ್ಯ ಐವನ್ ಡಿಸೋಜ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದರು.
ಕಲಾಪ ಆರಂಭವಾಗುತ್ತಿದ್ದಂತೆಯೇ ಮಾತನಾಡಿದ ಅವರು, ಶಾಸಕರ ಭವನದಲ್ಲಿಯೇ ತಿಂಡಿ ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
“ಶಾಸಕರಿಗೇ ಇಂತಹ ಸ್ಥಿತಿ ಇದ್ದರೆ ಜನರ ಪರಿಸ್ಥಿತಿ ಹೇಗಿರಬಹುದು?” ಎಂದು ಪ್ರಶ್ನಿಸಿ, ಸಮಸ್ಯೆ ಯಾವಾಗ ಪರಿಹಾರವಾಗಲಿದೆ ಎಂದು ಸರ್ಕಾರದಿಂದ ಸ್ಪಷ್ಟನೆ ಕೇಳಿದರು.
ಈ ವೇಳೆ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಸದಸ್ಯರು ಇಡ್ಲಿ, ವಡೆ ಸಿಗುತ್ತಿಲ್ಲ ಎಂದು ದೂರುತ್ತಿದ್ದಾರೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಜಮೀರ್ ಅಹಮದ್, ತಿಂಡಿ ಸಮಸ್ಯೆಗೆ ಗ್ಯಾಸ್ ಕೊರತೆಯೇ ಮುಖ್ಯ ಕಾರಣ ಎಂದು ಸ್ಪಷ್ಟಪಡಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಹಾಸ್ಯಭರಿತವಾಗಿ “10 ನಿಮಿಷ ಸಮಯ ಕೊಡುತ್ತೇನೆ, ತಿಂಡಿ ತಿಂದು ಬನ್ನಿ” ಎಂದು ಹೇಳಿ ಸದನದಲ್ಲಿ ನಗೆ ಮೂಡಿಸಿದರು. ಆದರೆ ಈ ಘಟನೆ ರಾಜ್ಯದ ಗ್ಯಾಸ್ ಕೊರತೆ ಸಮಸ್ಯೆಯ ಗಂಭೀರತೆಯನ್ನು ತೋರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು