8:39 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ ಲೋಕಾಯುಕ್ತ ಪೊಲೀಸರು

19/03/2026, 20:07

ಕೋಲಾರ(reporterkarnataka.com): ಲಂಚ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಸಿಬ್ಬಂದಿಯಿಂದ ತಪ್ಪಿಸಿಕೊಳ್ಳಲು ಕಾರಿನಲ್ಲಿ ಪರಾರಿಯಾಗುತ್ತಿದ್ದ ಕೋಲಾರ ಸಹಾಯಕ ಔಷಧ ನಿಯಂತ್ರಕಿಯ ಕಾರನ್ನು ಲೋಕಾಯುಕ್ತ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನತ್ತಿ ಅವರನ್ನು ಬಂಧಿಸಿದ್ದಾರೆ.
ಔಷಧ ಅಂಗಡಿ ಸ್ಥಳಾಂತರಕ್ಕೆ ಪರ‌ವಾನಗಿ ನೀಡಲು ಕೋಲಾರ ಸಹಾಯಕ ಔಷಧ ನಿಯಂತ್ರಕಿ ಜೆ.ಶ್ಯಾಮಲಾ ₹35 ಸಾವಿರ ಲಂಚ ಪಡೆಯುವಾಗ ಈ ನಾಟಕೀಯ ಘಟನೆ ನಡೆದಿದೆ.ಔಷಧ ಅಂಗಡಿ ಬೇರೆಡೆಗೆ ಸ್ಥಳಾಂತರಕ್ಕೆ ಪರವಾನಗಿ ನೀಡಲು ಅಧಿಕಾರಿ ₹35 ಸಾವಿರ ಲಂಚ ಕೇಳುತ್ತಿದ್ದಾರೆ ಎಂದು ಟೇಕಲ್‌ನ ಅಂಗಡಿ ಮಾಲೀಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಟೇಕಲ್‌ನಲ್ಲಿ ಮಂಗಳವಾರ ಕಾರಿನಲ್ಲಿಯೇ ಅಧಿಕಾರಿ ಲಂಚದ ಹಣ ಪಡೆಯುವಾಗ ಜಿಲ್ಲಾ ಲೋಕಾಯುಕ್ತ ಅಧೀಕ್ಷಕ ಆಯಂಟೊನಿ ಜಾನ್‌ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ತಕ್ಷಣ ಮಹಿಳಾ ಅಧಿಕಾರಿಯು ಸಹಾಯಕ ಔಷಧ ನಿಯಂತ್ರಕರ ಕಚೇರಿಯ ‌’ಡಿ’ ಗ್ರೂಪ್ ನಿವೃತ್ತ ನೌಕರ ಶ್ರೀನಿವಾಸ್‌ ಮತ್ತು ಚಾಲಕನೊಂದಿಗೆ ಕಾರಿನಲ್ಲಿ ಪರಾರಿಯಾದರು.

ಬಂಗಾರಪೇಟೆ ಕಡೆ ವೇಗವಾಗಿ ಹೊರಟ ಕಾರನ್ನು ಲೋಕಾಯುಕ್ತ ಪೊಲೀಸರು ಬೆನ್ನಟ್ಟಿದ್ದಾರೆ. ಸುಮಾರು 15 ಕಿ.ಮೀ. ದೂರ ಬೆನ್ನತ್ತಿದ ನಂತರ ಆರೋಪಿಗಳ ಕಾರಿಗೆ ತಮ್ಮ ಕಾರನ್ನು ಅಡ್ಡ ನಿಲ್ಲಿಸಿ ಹಿಡಿದಿದ್ದಾರೆ.

ಜೆ.ಶ್ಯಾಮಲಾ, ಶ್ರೀನಿವಾಸ್ ಮತ್ತು ಶ್ಯಾಮಲಾ ಅವರ ಕಾರಿನ ಚಾಲಕ ಮಹಾಂತೇಶ್‌ ಅವರನ್ನು ಮಂಗಳವಾರ ರಾತ್ರಿ ಬಂಧಿಸಿರುವುದಾಗಿ ಆಯಂಟೋನಿ ಜಾನ್‌ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು