10:19 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಬರೋಲ್ಲ ಅಡುಗೆ ಅನಿಲ ಹೊತ್ತ ಶಿವಾಲಿಕ್ ಹಡಗು: ಗುಜರಾತಿನಲ್ಲೇ ಇಳಿಸಲಿದೆ ಎಲ್ ಪಿಜಿ

20/03/2026, 11:13

ಮಂಗಳೂರು(reporterkarnataka.com): ಪಶ್ಚಿಮ ಏಷ್ಯಾದ ಯುದ್ಧ ಪೀಡಿತ ಪ್ರದೇಶದಲ್ಲಿರುವ ಹೊರ್ಮುಜ್‌ ಜಲಸಂಧಿಯ ಮೂಲಕ ಸಾಗಿ ಗುಜರಾತಿನ ಮುಂದ್ರಾ ಬಂದರನ್ನು ಸೋಮವಾರ ತಲುಪಿದ್ದ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಹೊತ್ತ ಶಿವಾಲಿಕ್‌ ಹಡಗು ನವಮಂಗಳೂರು ಬಂದರಿಗೆ ಬರುತ್ತಿಲ್ಲ.
ಶಿವಾಲಿಕ್ ಹಡಗಿನಲ್ಲಿದ್ದ ಎಲ್‌ಪಿಜಿಯಲ್ಲಿ ಸುಮಾರು 20 ಸಾವಿರ ಟನ್‌ ಅನ್ನು ಮುಂದ್ರಾ ಬಂದರಿನಲ್ಲಿ ಇಳಿಸಿ, ಸುಮಾರು 26 ಸಾವಿರ ಟನ್‌ ಎಲ್‌ಪಿಜಿಯೊಂದಿಗೆ ಇಲ್ಲಿನ ನವಮಂಗಳೂರು ಬಂದರಿಗೆ ಬುಧವಾರ ಬರಲಿದೆ ಎಂಬ ಮಾಹಿತಿ ಇತ್ತು. ಆದರೆ ಆ ಹಡಗು ಇಲ್ಲಿಗೆ ಬರುತ್ತಿಲ್ಲ’ ಎಂದು ನವಮಂಗಳೂರು ಬಂದರಿನ ಮೂಲಗಳು ತಿಳಿಸಿವೆ.
‘ಶಿವಾಲಿಕ್ ಹಡಗಿನಲ್ಲಿದ್ದ ಭಾಗಶಃ ಎಲ್‌ಪಿಜಿಯನ್ನು ಮುಂದ್ರಾ ಬಂದರಿನಲ್ಲಿ ಇಳಿಸಲಾಗಿದೆ. ಇನ್ನುಳಿದ ಎಲ್‌ಪಿಜಿ ಅನ್ನು ಗುಜರಾತಿನ ದಹೇಜ್ ಟರ್ಮಿನಲ್‌ನಲ್ಲಿ ಇಳಿಸಲಾಗುತ್ತಿದೆ’ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಚ್‌ಪಿಸಿಎಲ್‌ ಸಂಸ್ಥೆಗೆ ಎಲ್‌ಪಿಜಿ ಪೂರೈಸುವ ಹಡಗೊಂದು ಇದೇ 20ರ ನಂತರ ನವ ಮಂಗಳೂರು ಬಂದರು ತಲುಪುವ ನಿರೀಕ್ಷೆ ಇದೆ.

‘ನಮ್ಮ ಸಂಸ್ಥೆಗೆ ಎಲ್‌ಪಿಜಿ ಪೂರೈಸುವ ಹಡಗು ಮಂಗಳೂರು ಕಡೆಗೆ ಪ್ರಯಾಣ ಬೆಳೆಸುತ್ತಿದೆ. ಹಡಗಿನಲ್ಲಿರುವ ಒಟ್ಟು ಎಲ್‌ಪಿಜಿಯಲ್ಲಿ ಇಲ್ಲಿ ಎಷ್ಟನ್ನು ಇಳಿಸಲಾಗುತ್ತದೆ ಎಂಬ ಖಚಿತ ಮಾಹಿತಿ ಇಲ್ಲ’ ಎಂದು ಎಚ್‌ಪಿಸಿಎಲ್ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು