10:15 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

Shivamogga | ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ: ಯುವ ವೈದ್ಯೆ ದಾರುಣ ಸಾವು

20/03/2026, 12:34

ಶಿವಮೊಗ್ಗ(reporterkarnataka.com): ಶಿವಮೊಗ್ಗದ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ‌ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ‌ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ‌ ಇನ್ಜು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ಆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ‌ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.

ತನಿಖೆಗೆ ಸೂಚನೆ: ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು