8:38 AM Saturday1 - August 2026
ಬ್ರೇಕಿಂಗ್ ನ್ಯೂಸ್
ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:…

ಇತ್ತೀಚಿನ ಸುದ್ದಿ

ದೇವೇಗೌಡ-ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇಲ್ಲ; ಅವರನ್ನು ಪಿಎಂ-ಸಿಎಂ ಮಾಡಿದ್ದು ನಮ್ಮ ಪಕ್ಷ: ಡಿಸಿಎಂ ಡಿ.ಕೆ‌. ಶಿವಕುಮಾರ್

20/03/2026, 22:57

ಬೆಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷವು ಜಾತ್ಯತೀತ ತತ್ವ ಉಳಿಸಬೇಕು ಎಂಬ ಕಾರಣಕ್ಕೆ ದೇವೇಗೌಡರನ್ನು ಪ್ರಧಾನಿ ಮಾಡಿದ್ದು, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದೆವು. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ.

ಆದರೆ, ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ವಿಶಾಲ ಹೃದಯ ಅವರಿಗೆ ಇರಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ರಾಜ್ಯಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ -ಜೆಡಿಎಸ್‌ ಸಂಬಂಧ ಹೇಳಿಕೆ ಬಗ್ಗೆ ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ, ಧೈರ್ಯ ಎರಡನ್ನೂ ಅವರಿಬ್ಬರು ಹೊಂದಿರಲಿಲ್ಲ‌. ಮೈತ್ರಿಯನ್ನು ಸಾವಧಾನ, ಸಂತೋಷದಿಂದ ಮುನ್ನಡೆಸುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ಒಯ್ಯದ್ದಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು. ದೇವೇಗೌಡರನ್ನು ಪ್ರಧಾನಿ ಮಾಡಿದ್ದು ಹಾಗೂ ಅವರ ಮಗ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ನಮ್ಮ ಪಕ್ಷ ಅವರಿಗೆ ಎಲ್ಲಾ ಅವಕಾಶಗಳನ್ನು ನೀಡಿದೆ” ಎಂದರು‌. ಅವರುಗಳು ಕೊಟ್ಟಂತಹ ಸ್ಥಾನವನ್ನು ನಿಭಾಯಿಸುವ ಸಾಮರ್ಥ್ಯ ಮತ್ತು ಧೈರ್ಯ ಎರಡನ್ನೂ ಹೊಂದಿರಲಿಲ್ಲ‌. ಮೈತ್ರಿಯನ್ನು ಸಾವಧಾನದಿಂದ ಹಾಗೂ ಸಂತೋಷದಿಂದ ಮುನ್ನಡೆಸಿಕೊಂಡು ಹೋಗುವುದು ಅವರ ಕರ್ತವ್ಯವಾಗಿತ್ತು. ಜೊತೆಯಾಗಿ ತೆಗೆದುಕೊಂಡು ಹೋಗದ ಕಾರಣಕ್ಕೆ ಅವರು ಅಧಿಕಾರ ಕಳೆದುಕೊಳ್ಳಬೇಕಾಯಿತು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು