7:27 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ಸೋಮವಾರದಿಂದ ರಾಜ್ಯಗಳಿಗೆ ಹೆಚ್ಚುವರಿ ಸಿಲಿಂಡರ್ ಪೂರೈಕೆ

21/03/2026, 22:39

ನವದೆಹಲಿ(reporterkarnataka.com): ಕಳೆದ ಕೆಲವು ದಿನಗಳಿಂದ ಎಲ್‌ಪಿಜಿ (LPG) ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಹತ್ವದ ಸಮಾಧಾನ ನೀಡಿದೆ. ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಾಡ. ಶೇಕಡಾ 50ರ ಮಟ್ಟಕ್ಕೆ ತಲುಪಲಿದೆ. ಮಾರ್ಚ್ 23, 2026ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯಗಳಿಗೆ ಹೆಚ್ಚುವರಿ ಶೇ. 20ರಷ್ಟು LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ.
ಈ ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಧಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ.
ವಲಸೆ ಕಾರ್ಮಿಕರ ಹಿತದೃಷ್ಟಿಯಿಂದ ಅವರಿಗೆ 5 ಕೆಜಿ ಸಣ್ಣ ಸಿಲಿಂಡರ್ (FTL) ಒದಗಿಸುವ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಹೆಚ್ಚುವರಿ ಅನುದಾನವು ಕೇವಲ ನಿಗದಿಪಡಿಸಿದ ವಲಯಗಳಿಗೆ ತಲುಪುವಂತೆ ನೋಡಿಕೊಳ್ಳಲು ಮತ್ತು ಕಾಳಸಂತೆ ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು