11:14 PM Sunday22 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಚಂದನದಲ್ಲಿ ಕುಂ. ವೀರಭದ್ರಪ್ಪನವರ ‘ಅರಮನೆ’ ಮಹಾಕಾವ್ಯದ ದೃಶ್ಯರೂಪ ಮಾರ್ಚ್ 25ರಿಂದ ಪ್ರಸಾರ

22/03/2026, 23:13

ಬೆಂಗಳೂರು(reporterkarnataka.com): ಗುಣಮಟ್ಟದ ಕಾರ್ಯಕ್ರಮಗಳು ಹಾಗೂ ಸದಭಿರುಚಿಯ ಧಾರಾವಾಹಿಗಳಿಗೆ ಹೆಸರಾಗಿರುವ ದೂರದರ್ಶನ ಚಂದನ ವಾಹಿನಿಯು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ ಕೃತಿಗಳನ್ನು ಕಿರುತೆರೆಯ ಮೇಲೆ ತರುವ ತನ್ನ ಸುದೀರ್ಘ ಪರಂಪರೆಯನ್ನು ಮುಂದುವರಿಸುತ್ತಿದೆ. ಈ ನಿಟ್ಟಿನಲ್ಲಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕಾದಂಬರಿ, ನಾಡೋಜ ಡಾ. ಕುಂ. ವೀರಭದ್ರಪ್ಪ ಅವರ ವಿಶಿಷ್ಟ ಕೃತಿ ಅರಮನೆ ಈಗ ಮೆಗಾ ಧಾರಾವಾಹಿಯಾಗಿ ಮೂಡಿಬರುತ್ತಿದೆ.


ಈ ಧಾರವಾಹಿಯು ಮಾರ್ಚ್ 25 ರಿಂದ, ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 7.30 ಗಂಟೆಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಪ್ರಸಾರವಾಗಲಿದೆ.

*ಸಾಂಸ್ಕೃತಿಕ ಹಿನ್ನೆಲೆ ಮತ್ತು ವಿಶೇಷತೆ*:
ದೂರದರ್ಶನ ಚಂದನವು ಮೊದಲಿನಿಂದಲೂ ಖ್ಯಾತ ಸಾಹಿತಿಗಳ ಕಥೆ-ಕಾದಂಬರಿಗಳನ್ನು ಆಧರಿಸಿದ ಧಾರಾವಾಹಿಗಳ ಮೂಲಕ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದೆ. ಇದೀಗ ಅದೇ ಕಟಿಬದ್ಧತೆಯೊಂದಿಗೆ, ಆಧುನಿಕ ತಂತ್ರಜ್ಞಾನ ಮತ್ತು ರಂಗಭೂಮಿಯ ಸತ್ವವನ್ನು ಬೆರೆಸಿ ‘ಅರಮನೆ’ ಕಾದಂಬರಿಯನ್ನು ದೃಶ್ಯರೂಪಕ್ಕೆ ಇಳಿಸಲಾಗಿದೆ.

*​ತಾಂತ್ರಿಕ ಮತ್ತು ಕಲಾತ್ಮಕ ತಂಡ*:
ರಾಷ್ಟ್ರ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಭರವಸೆಯ ಯುವ ನಿರ್ದೇಶಕರಾದ ಮನ್ಸೋರೆ ಅವರು ಈ ಬೃಹತ್ ಧಾರಾವಾಹಿಯನ್ನು ನಿರ್ದೇಶಿಸುತ್ತಿದ್ದಾರೆ. ಹಿರಿಯ ನಟಿ, ಪದ್ಮಶ್ರೀ ಪುರಸ್ಕೃತ ಬಿ. ಜಯಶ್ರೀ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈ ಸರಣಿಯ ವಿಶೇಷ ಆಕರ್ಷಣೆ.​

*ತಾರಾಗಣ*: ಬಿ. ಎಂ. ಗಿರಿರಾಜ್, ವೆಂಕಟೇಶ್ ಪ್ರಸಾದ್, ಚಂದನಾ, ಸಿತಾರ ನೀನಾಸಂ, ಬಿಂದು ರಕ್ಷಿದಿ, ವಿನಯ್ ಕೃಷ್ಣಸ್ವಾಮಿ, ಗುಂಡಣ್ಣ, ಮಂಜುನಾಥ ಜಂಬೆ ಮುಂತಾದ ಚಿತ್ರರಂಗ ಮತ್ತು ರಂಗಭೂಮಿಯ ಖ್ಯಾತ ಕಲಾವಿದರು ಪ್ರಮುಖ ಪಾತ್ರಗಳಲ್ಲಿದ್ದಾರೆ.​

*ತಾಂತ್ರಿಕ ವರ್ಗ*: ಶಿವು ಬಿ. ಕೆ. ಕುಮಾರ್ ಅವರ ಛಾಯಾಗ್ರಹಣ, ರೋಣದ ಬಕ್ಕೇಶ್ ಅವರ ಸಂಗೀತ ಸಂಯೋಜನೆ ಈ ಧಾರಾವಾಹಿಗಿದೆ.

*ಗಾಯನ ಮತ್ತು ಸಾಹಿತ್ಯ*: ತ್ರಿಲೋಕ್ ಅವರ ಸಾಹಿತ್ಯವಿರುವ ಶೀರ್ಷಿಕೆ ಗೀತೆಯನ್ನು ಖ್ಯಾತ ಗಾಯಕ ರವೀಂದ್ರ ಸೊರಗಾವಿ ಹಾಡಿದ್ದಾರೆ. ಪಿ. ಚಂದ್ರಿಕಾ ಅವರ ಚಿತ್ರಕಥೆ ಹಾಗೂ ಪ್ರವೀಣ್ ಕುಮಾರ್ ಜಿ. ಅವರ ಸಂಭಾಷಣೆ ಕೃತಿಯ ಹೂರಣವನ್ನು ಸಮರ್ಥವಾಗಿ ಕಟ್ಟಿಕೊಟ್ಟಿವೆ.
​ಉತ್ತಮ ಸಾಹಿತ್ಯ ಕೃತಿಗಳನ್ನು ಜನಸಾಮಾನ್ಯರ ಮನೆಬಾಗಿಲಿಗೆ ತಲುಪಿಸುವ ಈ ಮಹತ್ವಾಕಾಂಕ್ಷೆಯ ಪ್ರಯತ್ನಕ್ಕೆ ಕನ್ನಡದ ಎಲ್ಲಾ ಕಲಾಭಿಮಾನಿಗಳು ಮತ್ತು ಪ್ರೇಕ್ಷಕರು ಪ್ರೀತಿಯಿಂದ ಬೆಂಬಲ ನೀಡಬೇಕೆಂದು ಚಂದನ ವಾಹಿನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು