1:26 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಖ್ಯಾತಿಯ ಬಾವತೀಶ್ ಇನ್ನಿಲ್ಲ: ನಿಂತಿದ್ದ ಬಸ್‌ಗೆ ಬೈಕ್ ಡಿಕ್ಕಿ: ಅಪಘಾತದ ರಭಸಕ್ಕೆ ಹೊತ್ತಿ ಉರಿದ ದ್ವಿಚಕ್ರ ವಾಹನ

25/03/2026, 15:17

ಕಾರವಾರ(reporterkarnataka.com): ಪ್ರಸಿದ್ಧ ರಿಯಾಲಿಟಿ ಶೋ ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿಯಾಗಿದ್ದ ಬಾವತೀಶ್ (28) ಅವರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೋಳಿಕೆರೆ ಸಮೀಪ ಈ ದುರ್ಘಟನೆ ಸಂಭವಿಸಿದೆ. ಹಳಿಯಾಳ ತಾಲೂಕಿನ ವಾಡಗರಡೊಳ್ಳಿ ನಿವಾಸಿಯಾದ ಬಾವತೀಶ್ ಅವರು ತಮ್ಮ ಟಿವಿಎಸ್ ಮೊಫೆಡ್ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ಗೆ ಅತೀ ವೇಗವಾಗಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ ಎನ್ನಲಾಗಿದೆ.
ಡಿಕ್ಕಿಯ ರಭಸ ಎಷ್ಟಿತ್ತೆಂದರೆ, ಅಪಘಾತವಾದ ತಕ್ಷಣ ಅವರ ದ್ವಿಚಕ್ರ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ಬಾವತೀಶ್ ಅವರು ರಸ್ತೆಯಲ್ಲೇ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಬಾವತೀಶ್ ಅವರು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಗಳಿಸಿದ್ದರು. ಅವರ ಅನಿರೀಕ್ಷಿತ ಸಾವು ಕುಟುಂಬಸ್ಥರು ಹಾಗೂ ಅಭಿಮಾನಿ ವಲಯದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು