3:55 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಹುಬ್ಬಳ್ಳಿಯ ಅಗಸದಲ್ಲಿ ಯುದ್ಧ ವಿಮಾನಗಳ ಭಾರೀ ಘರ್ಜನೆ: ಆತಂಕಗೊಂಡ ಜನತೆ

26/03/2026, 10:37

ಹುಬ್ಬಳ್ಳಿ(reporterkarnataka.com): ಹುಬ್ಬಳ್ಳಿ ನಗರದಲ್ಲಿ ಅಚಾನಕ್ಕಾಗಿ ಅಗಸದಲ್ಲಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು.
ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ ಎಂಬುದು ಸ್ಪಷ್ಟವಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು ನೀಡಿದ ಮಾಹಿತಿಯಂತೆ, ಈ ಮೂರು ಯುದ್ಧ ವಿಮಾನಗಳು ಗೋವಾ ವಿಮಾನ ನಿಲ್ದಾಣದಿಂದ ಟೇಕ್‌ಆಫ್ ಆಗಿ, ನಿಯಮಿತವಾಗಿ ನಡೆಯುವ ತರಬೇತಿ ಹಾರಾಟದ ಭಾಗವಾಗಿ ಹುಬ್ಬಳ್ಳಿ ಆಕಾಶದಲ್ಲಿ ಸಂಚರಿಸಿದ್ದವು. ಇಂತಹ ಪ್ರಾಯೋಗಿಕ ಹಾರಾಟಗಳು ಸಾಮಾನ್ಯವಾಗಿ ಎರಡು ತಿಂಗಳಿಗೆ ಒಮ್ಮೆ ನಡೆಯುತ್ತವೆ. ಜನರು ಯಾವುದೇ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು