3:03 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

Kodagu | ವಿರಾಜಪೇಟೆ: ಕಾಳುಮೆಣಸು ಕಳ್ಳತನ; 3 ಮಂದಿ ಆರೋಪಿಗಳ ಬಂಧನ

26/03/2026, 14:47

ಗಿರಿಧರ್ ಕೊಂಪುಳಿರ ಮಡಿಕೇರಿ

info..reporterkarnataka@gmail.com

ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಣಗಿಸಲು ಹಾಕಲಾಗಿದ್ದ ಕಾಳು ಮೆಣಸು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲು ಸಮೇತ ಮೂವರನ್ನು ಬಂಧಿಸಲಾಗಿದೆ.ಮೂಲತಃ ತಿತಿಮತಿ ನೋಕ್ಯ ಗ್ರಾಮದ ಸದ್ಯ ಪೆರಂಬಾಡಿಯ ನಿವಾಸಿ ಶಫೀಕ್ ಕೆ. ಬಿ(28), ಆರ್ಜಿ ಗ್ರಾಮದ ದರ್ಶನ್ ನಾಯಕ್(25) ಕೇರಳದ ಮಾನಂದವಾಡಿಯ ಎಡಪಾಡಿ ನಿವಾಸಿ ಮೊಹಮದ್ ಶಾಕೀರ್ (31) ಬಂಧಿತರು. ವಿರಾಜಪೇಟೆ ತಾಲ್ಲೂಕಿನ ಕಣ್ಣಂಗಾಲ ಗ್ರಾಮದ ಲೆಹರ್ ಗಣಪತಿ ಎಂಬುವವರಿಗೆ ಸೇರಿದ ಕಾಫಿ ಕಣದಿಂದ 300 ಕೆಜಿ ಕಾಳು ಮೆಣಸು ಕಳುವು ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ ತನಿಖೆ ಕೈಗೊಂಡ ಪೊಲೀಸರು ಆರೋಪಿಗಳನ್ನು ಹುಣಸೂರು ತಾಲ್ಲೂಕು ಪಂಚವಳ್ಳಿಯಲ್ಲಿ ಬಂಧಿಸಿದ್ದಾರೆ. ಬಂಧಿತರು ಕಳುವು ಮಾಡಿದ ಕಾಳು ಮೆಣಸು ಸ್ಥಳೀಯವಾಗಿ ಮಾರಾಟ ಮಾಡಿದರೆ ಅನುಮಾನ ಬರುತ್ತದೆ ಎನ್ನುವ ಕಾರಣಕ್ಕೆ ಕೇರಳದಲ್ಲಿ 215 ಕೆಜಿ ಮಾರಾಟ ಮಾಡಿದ್ದು ವಶಕ್ಕೆ ಪಡೆಯಲಾಗಿದೆ, ಕೃತ್ಯಕ್ಕೆ ಬಳಸಿದ್ದ ಎರಡು ಕಾರು ಒಂದು ಬೈಕ್ ಸಹ ಪಡೆದುಕೊಂಡಿದ್ದು, ಬಂದಿತರ ಮೇಲೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ 75 ಕೆಜಿ ಕಾಳು ಮೆಣಸು ಮತ್ತು ಕಾರು ಕಳ್ಳತನ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು