3:25 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಲಾರಿ ಜೀಪ್ ನಡುವೆ ಭೀಕರ ಅಪಘಾತ ; ಮೃತರಾದವರ ಸಂಖ್ಯೆ 8 ಕ್ಕೆ ಏರಿಕೆ

12/09/2021, 22:56

ಚಿಕ್ಕಬಳ್ಳಾಪುರ(Reporterkarnataka.com)

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಲಾರಿ ಹಾಗೂ ಜೀಪಿನ ನಡುವಿನ ಭೀಕರ ಅಪಘಾತದಲ್ಲಿ ಮೃತರಾದವರ ಸಂಖ್ಯೆ ಎಂಟಕ್ಕೆ ಏರಿದೆ.

ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಆಸ್ಪತ್ರೆಯಲ್ಲಿ ಇಬ್ಬರು ಅಸುನೀಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು,
ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಗಂಭೀರ ಗಾಯಾಳುಗಳು ಇಬ್ಬರು ಸಾವನ್ನಪ್ಪಿದ್ದಾರೆ.

ತಾಡಿಗೋಳ್ ಕ್ರಾಸ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಜೀಪ್ ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡಿದೆ

ಇತ್ತೀಚಿನ ಸುದ್ದಿ

ಜಾಹೀರಾತು