ಇತ್ತೀಚಿನ ಸುದ್ದಿ
Kodagu | ಸೋಮವಾರಪೇಟೆ: ಬೈಕ್ ನಲ್ಲಿ ಗಾಂಜಾ ಸಾಗಾಟ: ಇಬ್ಬರ ಬಂಧನ
26/03/2026, 14:52
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಗಾಂಜಾ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಸೋಮವಾರಪೇಟೆ ಅಬಕಾರಿ ಇಲಾಖೆ ಅಧಿಕಾರಿಗಳು ಮಾಲು ಸಮೇತ ಇಬ್ಬರನ್ನು ಬಂಧಿಸಿದ್ದಾರೆ.
ಕುಶಾಲನಗರ ಭಾಗದಿಂದ ಸೋಮವಾರಪೇಟೆಗೆ ದ್ವಿಚಕ್ರ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೆರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಪಟ್ಟಣ ಸಮೀಪದ ಕರ್ಕಳ್ಳಿ ಗ್ರಾಮದ ಎಸ್. ಟಿ. ಯಶವಂತ್ ಹಾಗೂ ಎಸ್. ಡಿ ಚೇತನ್ ಅವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಕುಶಾಲನಗರದಿಂದ ಗಾಂಜಾ ತಂದು ಸೋಮವಾರಪೇಟೆ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಮಾರಾಟ ಮಾಡುತ್ತಿದ್ದವರು ಸಹ ಗಾಂಜಾ ವ್ಯಸನಿಗಳು ಎಂದು ತನಿಖೆಯಿಂದ ತಿಳಿದು ಬಂದಿದೆ.
ಆರೋಪಿಗಳಿಂದ ತೆನೆ ಬರಿತ 339 ಗ್ರಾಂ ಗಾಂಜಾ ಮತ್ತು ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.













