7:11 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮಂಗಳೂರು ಮಹಾನಗರಪಾಲಿಕೆ: 2026-27ನೇ ಸಾಲಿನ 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಮಂಡನೆ

26/03/2026, 16:15

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ 2026-27ನೇ ಸಾಲಿನ
156.17 ಕೋಟಿ ರೂ.ಗಳ ಮಿಗತೆ ಬಜೆಟ್ ಗುರುವಾರ ಮಂಡಿಸಲಾಯಿತು.
ದ.ಕ. ಜಿಲ್ಲಾಧಿಕಾರಿಯೂ ಆಗಿರುವ ಪಾಲಿಕೆಯ ಆಡಳಿತಾಧಿಕಾರಿ ದರ್ಶನ್ ಎಚ್.ವಿ. ಅವರು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದರು. ಅಂದಾಜು (ಆರಂಭಿಕ ಶುಲ್ಕ ಸೇರಿದಂತೆ) ಮೊತ್ತ 93768.94 ಲಕ್ಷ ರೂ. (937.69 ಕೋಟಿ ರೂ.). ಇದರಲ್ಲಿ ಅಂದಾಜು 781.51 ಕೋಟಿ ರೂ. ವೆಚ್ಚ ಪಾವತಿಗಳಾಗಿದ್ದು, ಈ ಮೂಲಕ ಅಂದಾಜು 156.17 ಕೋಟಿ ರೂ.ಗಳ ಮಿಗತೆ ಬಜೆಟ್ ಇದಾಗಿದೆ.
2025-26ನೆ ಸಾಲಿನಲ್ಲಿ ಬಜೆಟ್‌ನಲ್ಲಿ ಒಟ್ಟು 644.64 ಕೋಟಿ ರೂ.ಗಳ ಜಮೆಗಳನ್ನು ನಿರೀಕ್ಷಿಸಲಾಗಿದ್ದು, ಡಿಸೆಂಬರ್ 2025ರ ಅಂತ್ಯಕ್ಕೆ 342.25 ಕೋಟಿ ರೂ. ಜಮೆಗಳನ್ನು ಸ್ವೀಕರಿಸಲಾಗಿದೆ. ಇದೇ ವೇಳೆ ಕಳೆದ ಸಾಲಿನಲ್ಲಿ 789.72 ಕೋಟಿ ರೂ. ಪಾವತಿಗಳಲ್ಲಿ ಪಾಲಿಕೆಯ ಸ್ವಯಂ ಸಂಪನ್ಮೂಲ ಕ್ರೋಢೀಕರಣ ಹಾಗೂ ಸರಕಾರದಿಂದ ಬಿಡುಗಡೆಯಾದ ಅನುದಾನಗಳ ಆಧಾರದಲ್ಲಿ ಡಿಸೆಂಬರ್ ಅಂತ್ಯಕ್ಕೆ 393.47 ಕೋಟಿ ರೂ.ಗಳನ್ನು ಪಾವತಿಸಿರುವುದಾಗಿ ಬಜೆಟ್ ನಲ್ಲಿ ತಿಳಿಸಲಾಯಿತುಮ
2026-27ನೇ ಸಾಲಿನಲ್ಲಿ ಆಸ್ತಿ ತೆರಿಗೆಯಿಂದ 90 ಕೋಟಿ ರೂ., ನೀರು ಸರಬರಾಜು ಶುಲ್ಕವಾಗಿ 55 ಕೋಟಿ ರೂ., ಘನತ್ಯಾಜ್ಯ ನಿರ್ವಹಣಾ ಕರ 26 ಕೋಟಿ ರೂ., ಇತರ ಆದಾಯವಾಗಿ 26.48 ಕೋಟಿ ರೂ., ಕಟ್ಟಡ ಪರವಾನಿಗೆ- ಪ್ರೀಮಿಯಂ ಎಫ್‌ಎಆರ್‌ನಿಂದ 26 ಕೋಟಿ ರೂ., ಮಾರುಕಟ್ಟೆ ಸಾಲ 7.31 ಕೋಟಿ ರೂ.,ಬ್ಯಾಂಕ್ ಬಡ್ಡಿ 15 ಕೋಟಿ ರೂ., ಮಾರುಕಟ್ಟೆ, ಇತರ ಬಾಡಿಗೆಯಾಗಿ 5.47 ಕೋಟಿ ರೂ., ರಸ್ತೆ ಕಡಿತ, ಪುನರ್ ನಿರ್ಮಾಣ ಶುಲ್ಕದಿಂದ 3 ಕೋಟಿ ರೂ.
ಸೇರಿದಂತೆ ಒಟ್ಟು 337.25 ಕೋಟಿ ರೂ.ಗಳ ಅಂದಾಜು ಆದಾಯವನ್ನು ನಿರೀಕ್ಷಿಸಲಾಗಿದೆ.
ರಾಜ್ಯ ಸರಕಾರದಿಂದ ವೇತನ, ಎಸ್‌ಎಫ್‌ಸಿ ಮುಕ್ತ ನಿಧಿ, ಪೌರ ಕಾರ್ಮಿಕರ ನೇರ ಪಾವತಿ ವೇತನ, ಸ್ಟ್ಯಾಂಪ್ ಶುಲ್ಕದ ಸರ್‌ಚಾರ್ಜ್ ಸೇರಿದಂತೆ ವಿವಿಧ ಯೋಜನೆಗಳಿಗೆ ಒಟ್ಟು 199.23 ಕೋಟಿ ರೂ. ಅನುದಾನವನ್ನು ನಿರೀಕ್ಷಿಸಲಾಗಿದೆ.
ಕೇಂದ್ರದಿಂದ ಅಮೃತ್ 2.0 ಜಲ್ ಹಿ ಅಮೃತ್, ನಲ್ಮ್, ಸ್ವಚ್ಛ ಭಾರತ ಮಿಷನ್, 15ನೇ ಹಣಕಾಸು ಮುಕ್ತ ಅನುದಾನ, 16ನೇ ಹಣಕಾಸು, ಎನ್‌ಜಿಟಿ ಸೇರಿದಂತೆ ಒಟ್ಟು 93.36 ಕೋಟಿ ರೂ.ಗಳನ್ನು ನಿರೀಕ್ಷಿಸಲಾಗಿದೆ.
ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಕಂದಾಯ ಅಧಿಕಾರಿ (ಆಡಳಿತ) ಅಕ್ಷತಾ ಉಪಸ್ಥಿತರಿದ್ದರು.
ಜನಪ್ರತಿನಿಧಿಗಳ ಆಡಳಿತವಿಲ್ಲದ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿಯಾದ ಜಿಲ್ಲಾಧಿಕಾರಿ ಬಜೆಟ್ ಮಂಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು