6:23 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ

13/09/2021, 09:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ  ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ಪೊಲೀಸ್ ರು ಸಿಂಧನೂರಿನ ಕರಣಾ ಆಶ್ರಮಕ್ಕೆ ಸೇರಿಸಿದ್ದಾರೆ.

ಪೊಲೀಸರು ನಿಯಮಾನುಸಾರ ತಮಿಳುನಾಡು ಮೂಲದ ಸುಮಾರು 50 ವಯಸ್ಸಿನ ಅನಾಥ ವ್ಯಕ್ತಿಯನ್ನು ರಕ್ಷಿಸಿ ಆತನಿಗೆ ಹೊಸ ಉಡುಪುಗಳನ್ನು ನೀಡಿ ಸತ್ಕರಿಸಿ ಮಾನವೀಯತೆ ಮೆರೆದಿದ್ದಾರೆ.

ಅನಾಥನನ್ನು ಸಿಂಧನೂರಿನ ಕರುಣಾ ಅನಾಥಾಶ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅನಾಥನನ್ನು ರಕ್ಷಣೆ ಮಾಡಿ ಆಶ್ರಯ ಕಲ್ಪಿಸುವಲ್ಲಿ ಕಾಳಜಿ ವಹಿಸಿ ಅನಾಥನ ಪಾಲಿಗೆ ಆಪ್ತ ರಕ್ಷಕರಾಗಿದ್ದಾರೆ ಪೊಲೀಸರು. ಇತ್ತೀಚೆಗೆ ಅನಾಮಧೇಯ ಶವ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,ಅನಾಥರಿಗೆ ಅನಾಥಾಶ್ರಮದಲ್ಲಿ ಆಶ್ರಯ ಕಲ್ಪಿಸುವುದರಿಂದಾಗಿ ಪ್ರಕರಣಗಳನ್ನು ತಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ತುಂಬ‍ಾ ಮುಖ್ಯವಾಗಿದೆ ಎಂದು ಸಿಪಿಐ ವಸಂತ ಅಸೋದೆ ತಿಳಿಸಿದ್ದಾರೆ. 

ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಾಲ್ಮೀಕಿ ಮುಖಂಡ  ಹಾಗೂ ಪಪಂ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಮಾತನಾಡಿ, ಎಲ್ಲಿಯಾದರೂ ಯಾರೇ ಅನಾಥರು ಹಾಗೂ ಬುದ್ಧಿಮಾಂಧ್ಯರು  ಕಂಡು ಬಂದಲ್ಲಿ ಅಥವಾ ಅನಾಥ ವೃದ್ಧರು ಕಂಡುಬಂದಲ್ಲಿ, ಶೀಘ್ರವಾಗಿ ಹತ್ತಿರ  ಆಶ್ರಮವನ್ನು ಸಂಪರ್ಕಿಸಬಹುದಾಗಿದೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಿದೆ. ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಿಸಬೇಕಿದೆ. ಈ ಮೂಲಕ ಹಿರಿಯ ನಾಗರೀಕರನ್ನ ಬುದ್ದಿಮಾಂಧ್ಯರನ್ನು ರಕ್ಷಿಸಬೇಕು ಹಾಗೂ ಅಪರಾಧ ನಿಯಂತ್ರಿಸುವಲ್ಲಿ ಪೊಲೀಸರೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕ ಬಾಲರಾಜಪ್ಪ, ಮುಖ್ಯ ಪೊಲೀಸ್ ಪೇದೆ ಸತ್ಯಪ್ಪ, ಸಿಂಧನೂರಿನ ಕರುಣಾ ಆಶ್ರಮದ ಸ್ವಯಂ ಸೇವಕ ಪಂಪಯ್ಯಸ್ವಾಮಿ ಸೇರಿದಂತೆ ಆಸ್ರಮದ ಸಿಬ್ಬಂದಿ ಹಾಗೂ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು