2:04 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಕೂಡ್ಲಗಿ ಬಸ್ ನಿಲ್ದಾಣದಲ್ಲಿ 1 ವರ್ಷದಿಂದ ವಾಸವಾಗಿರುವ ಅನಾಥನ ರಕ್ಷಿಸಿದ ಪೊಲೀಸರು; ಅನಾಥಾಶ್ರಮಕ್ಕೆ ಸೇರ್ಪಡೆ

13/09/2021, 09:41

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಅನಾಥನನ್ನು ಕೂಡ್ಲಿಗಿ ಡಿವೈಎಸ್ಪಿ ಹರೀಶ್ ನಿರ್ದೇಶನದ ಮೇರೆಗೆ  ಸಿಪಿಐ ವಸಂತ ಅಸೋದೆ ಹಾಗೂ ಪಿಎಸ್ಐ ಶರತ್ ನೇತೃತ್ವದಲ್ಲಿ ಪೊಲೀಸ್ ರು ಸಿಂಧನೂರಿನ ಕರಣಾ ಆಶ್ರಮಕ್ಕೆ ಸೇರಿಸಿದ್ದಾರೆ.

ಪೊಲೀಸರು ನಿಯಮಾನುಸಾರ ತಮಿಳುನಾಡು ಮೂಲದ ಸುಮಾರು 50 ವಯಸ್ಸಿನ ಅನಾಥ ವ್ಯಕ್ತಿಯನ್ನು ರಕ್ಷಿಸಿ ಆತನಿಗೆ ಹೊಸ ಉಡುಪುಗಳನ್ನು ನೀಡಿ ಸತ್ಕರಿಸಿ ಮಾನವೀಯತೆ ಮೆರೆದಿದ್ದಾರೆ.

ಅನಾಥನನ್ನು ಸಿಂಧನೂರಿನ ಕರುಣಾ ಅನಾಥಾಶ್ರಮಕ್ಕೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಅನಾಥನನ್ನು ರಕ್ಷಣೆ ಮಾಡಿ ಆಶ್ರಯ ಕಲ್ಪಿಸುವಲ್ಲಿ ಕಾಳಜಿ ವಹಿಸಿ ಅನಾಥನ ಪಾಲಿಗೆ ಆಪ್ತ ರಕ್ಷಕರಾಗಿದ್ದಾರೆ ಪೊಲೀಸರು. ಇತ್ತೀಚೆಗೆ ಅನಾಮಧೇಯ ಶವ ಪತ್ತೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು,ಅನಾಥರಿಗೆ ಅನಾಥಾಶ್ರಮದಲ್ಲಿ ಆಶ್ರಯ ಕಲ್ಪಿಸುವುದರಿಂದಾಗಿ ಪ್ರಕರಣಗಳನ್ನು ತಗ್ಗಿಸಬಹುದಾಗಿದೆ. ಈ ನಿಟ್ಟಿನಲ್ಲಿ ತಾವು ಹಾಗೂ ತಮ್ಮ ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಇಲಾಖೆಯೊಂದಿಗೆ ಸಾರ್ವಜನಿಕರ ಸಹಕಾರ ತುಂಬ‍ಾ ಮುಖ್ಯವಾಗಿದೆ ಎಂದು ಸಿಪಿಐ ವಸಂತ ಅಸೋದೆ ತಿಳಿಸಿದ್ದಾರೆ. 

ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಾಲ್ಮೀಕಿ ಮುಖಂಡ  ಹಾಗೂ ಪಪಂ ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ ಮಾತನಾಡಿ, ಎಲ್ಲಿಯಾದರೂ ಯಾರೇ ಅನಾಥರು ಹಾಗೂ ಬುದ್ಧಿಮಾಂಧ್ಯರು  ಕಂಡು ಬಂದಲ್ಲಿ ಅಥವಾ ಅನಾಥ ವೃದ್ಧರು ಕಂಡುಬಂದಲ್ಲಿ, ಶೀಘ್ರವಾಗಿ ಹತ್ತಿರ  ಆಶ್ರಮವನ್ನು ಸಂಪರ್ಕಿಸಬಹುದಾಗಿದೆ ಅಥವಾ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕಿದೆ. ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಿಸಬೇಕಿದೆ. ಈ ಮೂಲಕ ಹಿರಿಯ ನಾಗರೀಕರನ್ನ ಬುದ್ದಿಮಾಂಧ್ಯರನ್ನು ರಕ್ಷಿಸಬೇಕು ಹಾಗೂ ಅಪರಾಧ ನಿಯಂತ್ರಿಸುವಲ್ಲಿ ಪೊಲೀಸರೊಂದಿಗೆ ಎಲ್ಲರೂ ಸಹಕರಿಸಬೇಕು ಎಂದು ಅವರು ಕೋರಿದರು.

ಈ ಸಂದರ್ಭದಲ್ಲಿ ಹೊಟೇಲ್ ಮಾಲೀಕ ಬಾಲರಾಜಪ್ಪ, ಮುಖ್ಯ ಪೊಲೀಸ್ ಪೇದೆ ಸತ್ಯಪ್ಪ, ಸಿಂಧನೂರಿನ ಕರುಣಾ ಆಶ್ರಮದ ಸ್ವಯಂ ಸೇವಕ ಪಂಪಯ್ಯಸ್ವಾಮಿ ಸೇರಿದಂತೆ ಆಸ್ರಮದ ಸಿಬ್ಬಂದಿ ಹಾಗೂ ಕೂಡ್ಲಿಗಿ ಪೊಲೀಸ್ ಸಿಬ್ಬಂದಿ ಹಾಗೂ ನಾಗರೀಕರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು