7:04 PM Friday27 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ…

ಇತ್ತೀಚಿನ ಸುದ್ದಿ

Mangaluru | ದುಬಾರಿಯಾಗುತ್ತಿದೆ ಪೊಲೀಸ್ ಧ್ವಜ ದಿನಾಚರಣೆ: ಬ್ಯಾಡ್ಜ್ ಗೆ 500 ರೂ. ವಸೂಲಿ!!

27/03/2026, 18:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ (Police Flag Day) ಆಚರಿಸಲಾಗುತ್ತದೆ. ಆದರೆ ಈ ಬಾರಿಯ ಧ್ವಜ ದಿನಾಚರಣೆ ಸಾರ್ವಜನಿಕರ ಪಾಲಿಕೆ ದುಬಾರಿಯಾಗಿ ಪರಿಣಮಿಸಿದೆ ಎಂಬ ಸಾರ್ವತ್ರಿಕ ಅಭಿಪ್ರಾಯ ಕೇಳಿ ಬರುತ್ತಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಧ್ವಜ ದಿನಾಚರಣೆ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಈ ನಿಟ್ಟಿನಲ್ಲಿ ಪೊಲೀಸ್ ಧ್ವಜವನ್ನು(ಬ್ಯಾಡ್ಜ್) ಖಾಸಗಿ ಸರ್ವಿಸ್ ಬಸ್ ಮತ್ತು ಸಿಟಿ ಬಸ್ ಗಳಿಗೆ ಹಂಚಲಾಗುತ್ತಿದೆ. ಖಾಸಗಿ ವಾಹನಗಳಿಗೂ ನೀಡಲಾಗುತ್ತದೆ. ಹಾಗೆಂತ ಇದು ಫ್ರಿಯಲ್ಲ, ಬದಲಿಗೆ 500 ರೂ. ಕೊಡಬೇಕು. ಈ ಹಿಂದೆ 100 ರೂ.ಗೆ ಧ್ವಜ ಹಂಚಲಾಗುತ್ತಿತ್ತು. ಆದರೆ, ಈ ಬಾರಿ ಧ್ವಜದ ದರ ಗಗನಕ್ಕೇರಿದೆ ಎಂದು ಬಸ್ ಚಾಲಕರು ಹಾಗೂ ನಿರ್ವಾಹಕರು ಹಿಡಿಶಾಪ ಹಾಕುತ್ತಿದ್ದಾರೆ. ಬಸ್ ಸಿಬ್ಬಂದಿಗಳಲ್ಲಿ ಧ್ವಜ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ. ಖಾಸಗಿ ವಾಹನಗಳ ಮಾಲೀಕರಿಗೂ ಪೊಲೀಸ್ ಸಿಬ್ಬಂದಿಗಳು ದುಂಬಾಲು ಬಿದ್ದಿದ್ದಾರೆ.ಅಂಗಡಿ- ಮುಂಗಟ್ಟುಗಳಿಗೂ ಧ್ವಜ ಹಂಚಲಾಗುತ್ತಿದೆ.
1965ರ ಏಪ್ರಿಲ್ 2ರಂದು ರಾಜ್ಯದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಗೆ ಬಂದ ಸವಿ ನೆನಪಿಗಾಗಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಸಮಾಜದ ಶಾಂತಿ, ಸುವ್ಯವಸ್ಥೆಗಾಗಿ ಕರ್ತವ್ಯದ ಹಾದಿಯಲ್ಲಿ ಬಲಿದಾನಗೈದ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಪೊಲೀಸ್ ಇಲಾಖೆಯು ಧ್ವಜಗಳನ್ನು ಮಾರಾಟ ಮಾಡುವ ಮೂಲಕ ನಿವೃತ್ತ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಕಲ್ಯಾಣ ನಿಧಿಗೆ ದೇಣಿಗೆ ಸಂಗ್ರಹಿಸುತ್ತದೆ.
ಉದ್ದೇಶವೇನೋ ಬಹಳ ಒಳ್ಳೆಯದು. ಆದರೆ ಈ ದುಬಾರಿ ದುನಿಯಾದಲ್ಲಿ ಧ್ವಜದ ಹೆಸರಿನಲ್ಲೂ 500 ರೂ. ಸಂಗ್ರಹಿಸುತ್ತಿರುವುದು ಸಹ್ಯವಾಗಿಲ್ಲ ಎಂದು ಮಂಗಳೂರಿನ ಹೆಚ್ಚಿನ ಬಸ್ ಚಾಲಕರು ಹಾಗೂ ನಿರ್ವಾಹಕರು ಅಭಿಪ್ರಾಯಪಡುತ್ತಾರೆ. ಪೊಲೀಸ್ ಸಿಬ್ಬಂದಿಗಳಲ್ಲಿ ಈ ಕುರಿತು ಕೇಳಿದರೆ, ಮೇಲಿನಿಂದ ಬಂದ ಆದೇಶ. ನಾವೇನೂ ಮಾಡುವ ಹಾಗಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸುತ್ತಾರೆ.
ಒಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಸಾರ್ವಜನಿಕರಿಗೆ ದುಬಾರಿಯಾಗಿ ಪರಿಣಮಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು