10:46 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

Mangaluru | ದುಬಾರಿಯಾಗುತ್ತಿದೆ ಪೊಲೀಸ್ ಧ್ವಜ ದಿನಾಚರಣೆ: ಬ್ಯಾಡ್ಜ್ ಗೆ 500 ರೂ. ವಸೂಲಿ!!

27/03/2026, 18:18

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ರಾಜ್ಯದಲ್ಲಿ ಪ್ರತಿ ವರ್ಷ ಏಪ್ರಿಲ್ 2ರಂದು ಪೊಲೀಸ್ ಧ್ವಜ ದಿನಾಚರಣೆ (Police Flag Day) ಆಚರಿಸಲಾಗುತ್ತದೆ. ಆದರೆ ಈ ಬಾರಿಯ ಧ್ವಜ ದಿನಾಚರಣೆ ಸಾರ್ವಜನಿಕರ ಪಾಲಿಕೆ ದುಬಾರಿಯಾಗಿ ಪರಿಣಮಿಸಿದೆ ಎಂಬ ಸಾರ್ವತ್ರಿಕ ಅಭಿಪ್ರಾಯ ಕೇಳಿ ಬರುತ್ತಿದೆ.
ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಧ್ವಜ ದಿನಾಚರಣೆ ಆಚರಿಸಲು ಸಕಲ ಸಿದ್ದತೆ ನಡೆದಿದೆ. ಈ ನಿಟ್ಟಿನಲ್ಲಿ ಪೊಲೀಸ್ ಧ್ವಜವನ್ನು(ಬ್ಯಾಡ್ಜ್) ಖಾಸಗಿ ಸರ್ವಿಸ್ ಬಸ್ ಮತ್ತು ಸಿಟಿ ಬಸ್ ಗಳಿಗೆ ಹಂಚಲಾಗುತ್ತಿದೆ. ಖಾಸಗಿ ವಾಹನಗಳಿಗೂ ನೀಡಲಾಗುತ್ತದೆ. ಹಾಗೆಂತ ಇದು ಫ್ರಿಯಲ್ಲ, ಬದಲಿಗೆ 500 ರೂ. ಕೊಡಬೇಕು. ಈ ಹಿಂದೆ 100 ರೂ.ಗೆ ಧ್ವಜ ಹಂಚಲಾಗುತ್ತಿತ್ತು. ಆದರೆ, ಈ ಬಾರಿ ಧ್ವಜದ ದರ ಗಗನಕ್ಕೇರಿದೆ ಎಂದು ಬಸ್ ಚಾಲಕರು ಹಾಗೂ ನಿರ್ವಾಹಕರು ಹಿಡಿಶಾಪ ಹಾಕುತ್ತಿದ್ದಾರೆ. ಬಸ್ ಸಿಬ್ಬಂದಿಗಳಲ್ಲಿ ಧ್ವಜ ಖರೀದಿಸುವಂತೆ ಒತ್ತಡ ಹೇರಲಾಗುತ್ತಿದೆ. ಖಾಸಗಿ ವಾಹನಗಳ ಮಾಲೀಕರಿಗೂ ಪೊಲೀಸ್ ಸಿಬ್ಬಂದಿಗಳು ದುಂಬಾಲು ಬಿದ್ದಿದ್ದಾರೆ.ಅಂಗಡಿ- ಮುಂಗಟ್ಟುಗಳಿಗೂ ಧ್ವಜ ಹಂಚಲಾಗುತ್ತಿದೆ.
1965ರ ಏಪ್ರಿಲ್ 2ರಂದು ರಾಜ್ಯದಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಜಾರಿಗೆ ಬಂದ ಸವಿ ನೆನಪಿಗಾಗಿ ಪೊಲೀಸ್ ಧ್ವಜ ದಿನಾಚರಣೆ ಆಚರಿಸಲಾಗುತ್ತಿದೆ. ಸಮಾಜದ ಶಾಂತಿ, ಸುವ್ಯವಸ್ಥೆಗಾಗಿ ಕರ್ತವ್ಯದ ಹಾದಿಯಲ್ಲಿ ಬಲಿದಾನಗೈದ ಪೊಲೀಸ್ ಅಧಿಕಾರಿಗಳನ್ನು ಗೌರವಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಅಂಗವಾಗಿ ಪೊಲೀಸ್ ಇಲಾಖೆಯು ಧ್ವಜಗಳನ್ನು ಮಾರಾಟ ಮಾಡುವ ಮೂಲಕ ನಿವೃತ್ತ ಸಿಬ್ಬಂದಿ ಮತ್ತು ಅವರ ಕುಟುಂಬಗಳ ಕಲ್ಯಾಣ ನಿಧಿಗೆ ದೇಣಿಗೆ ಸಂಗ್ರಹಿಸುತ್ತದೆ.
ಉದ್ದೇಶವೇನೋ ಬಹಳ ಒಳ್ಳೆಯದು. ಆದರೆ ಈ ದುಬಾರಿ ದುನಿಯಾದಲ್ಲಿ ಧ್ವಜದ ಹೆಸರಿನಲ್ಲೂ 500 ರೂ. ಸಂಗ್ರಹಿಸುತ್ತಿರುವುದು ಸಹ್ಯವಾಗಿಲ್ಲ ಎಂದು ಮಂಗಳೂರಿನ ಹೆಚ್ಚಿನ ಬಸ್ ಚಾಲಕರು ಹಾಗೂ ನಿರ್ವಾಹಕರು ಅಭಿಪ್ರಾಯಪಡುತ್ತಾರೆ. ಪೊಲೀಸ್ ಸಿಬ್ಬಂದಿಗಳಲ್ಲಿ ಈ ಕುರಿತು ಕೇಳಿದರೆ, ಮೇಲಿನಿಂದ ಬಂದ ಆದೇಶ. ನಾವೇನೂ ಮಾಡುವ ಹಾಗಿಲ್ಲ ಎಂದು ಅಸಹಾಯಕತೆ ಪ್ರದರ್ಶಿಸುತ್ತಾರೆ.
ಒಟ್ಟಿನಲ್ಲಿ ಪೊಲೀಸ್ ಧ್ವಜ ದಿನಾಚರಣೆ ಸಾರ್ವಜನಿಕರಿಗೆ ದುಬಾರಿಯಾಗಿ ಪರಿಣಮಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು