ಇತ್ತೀಚಿನ ಸುದ್ದಿ
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ
27/03/2026, 20:50
ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು,
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆಗಿದ್ದ ಹೆಗಡೆಯವರ ಬದುಕು ಹಾಗೂ ಸಾರ್ವಜನಿಕ ಸೇವೆ ಇಂದಿಗೂ ಜನ ಮಾನಸದಲ್ಲಿ ಹಚ್ಚಹಸಿರಾಗಿದೆ ಎಂದು ಹೇಳಿದರು.



ರಾಜ್ಯದ ಬಡಜನತೆಯ ಬದುಕು ಹಸನಗೊಳಿಸಲು ಅವರು ಜಾರಿಗೆ ತಂದಿದ್ದ ವಿಧವಾ ವೇತನ, ವೃದ್ಯಾಪ ವೇತನ, ಬಸ್ ಪಾಸು ಸೌಲಭ್ಯ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳ ಮೂಲಕ ರಾಜ್ಯದ ಮನೆ ಮಾತಾಗಿದ್ದ ರಾಮಕೃಷ್ಣ ಹೆಗಡೆಯವರು ಕಲುಷಿತ ರಾಜಕಾರಣದ ಶುದ್ಧತೆಗೆಗಾಗಿ ಪಣತೊಟ್ಟು ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟು ಹಾಕಿದ ಧೀಮಂತ ನಾಯಕ ಎಂದು ತಿಳಿಸಿದರು.












