1:09 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೂಡ್ಲಿಗಿ ತಾಲೂಕಿನಾದ್ಯಂತ 3 ದಿನಗಳ ಸಾಂಪ್ರದಾಯಿಕ ಸರಳ ಗಣೇಶೋತ್ಸವಕ್ಕೆ ತೆರೆ

13/09/2021, 10:14

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ
info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನೆಲ್ಲೆಡೆ ಸಾರ್ವಜನಿಕ ಸಾಂಪ್ರದಾಯಿಕ ಶ್ರೀಗಣೇಶೋತ್ಸವ ಜರುಗಿಸಲಾಗಿದೆ.

ಕೋವಿಡ್ ನಿಯಮ ಪಾಲಿಸುವ ನಿಯಮ ಪಾಲನೆಯಂತೆ, ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಧಾರ್ಮಿಕ ಶ್ರದ್ಧಾಭಕ್ತಿಯೊಂದಿಗೆ ಸರಳವಾಗಿ ಶ್ರೀಗಣೇಶೋತ್ಸವ ಆಚರಿಸಲಾಗಿತು.

ಮಹಿಳೆಯರು ಹಾಗೂ ವೃದ್ಧರ ನೆರವಿನೊಂದಿಗೆ ಬ‍ಾಲಕರು ಸಹಜವಾಗಿ ಗಲ್ಲಿ ಗಲ್ಲಿಗಳಲ್ಲಿ ಗಣೇಶೋತ್ಸವ ಆಚರಿಸಿದ್ದಾರೆ. 

ಕೂಡ್ಲಿಗಿ ಪಟ್ಟಣದ ನಾಗರೀಕ ಹಿತರಕ್ಷಣ ವೇದಿಕೆಯಿಂದ ಪ್ರತಿಷ್ಠಾಪಿಸಿರುವ  ಶ್ರೀಗಣೇಶನನ್ನು. ಕೋವಿಡ್ ನಿಯಮದಂತೆ  ಸಾಮೂಹಿಕ ಸರಳ ಗಣೇಶೋತ್ಸವ ಆಚರಿಸಲ‍ಾಯಿತ. ನಾಗರೀಕ ಹಿತರಕ್ಷಣ ವೇದಿಕೆ ಪದಾಧಿಕಾರಿಗಳು  ಹಾಗೂ ಹಿರಿಯ ನಾಗರೀಕರು ಹಾಗೂ ಬೀದಿ ಬದಿ ವ್ಯಾಪಾರಿಗಳಿಂದ ಶ್ರೀಕೊತ್ತಲಾಂಜನೇಯ ಪಾದಗಟ್ಟೆ ಬಳಿ ಪ್ರತಿಷ್ಠಾಪಿಸಲಾಗಿತ್ತು.

ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕೋವಿಡ್ ನಿಯಮ ಪಾಲನೆ ಕಡ್ಡಾಯ ಜಾರಿ ಹಿನ್ನಲೆಯಲ್ಲಿ ಗಣೇಶೋತ್ಸವ ನೆಪದಲ್ಲಿ ಆಚರಿಸುವ ಡ್ಯಾನ್ಸ್ ಹಾಗೂ ಸಾಂಸ್ಕೃತಿಕ ಆಚರನೆಣೆಗಳಿಗೆ ಬ್ರೇಕ್ ಬಿದ್ದಿದೆ. ಸರಳ ಸಾಂಪ್ರದಾಯಿಕ ಮೂರು ದಿನಗಳ ಉತ್ಸವಕ್ಕೆ ತಾಲೂಕಿನೆಲ್ಲೆಡೆ ಸೆ12ರಂದು ತೆರೆಬಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು