3:43 PM Sunday22 - September 2024
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ 30 ಅಡಿ ಎತ್ತರದಿಂದ ಗ್ರಾಪಂ ಆವರಣಕ್ಕೆ ಕಾರು… ವಿಶ್ವ ವಿಜ್ಞಾನಿಗಳ ಪಟ್ಟಿ: ಬಳ್ಳಾರಿಯ ವಿಎಸ್‌ಕೆಯುನ ಮೂವರು ಪ್ರಾಧ್ಯಾಪಕರಿಗೆ ಸ್ಥಾನ ​ ಸರಕಾರದ ನೇಮಕಾತಿಯಲ್ಲಿ ಮೀಸಲಾತಿ ಪರಿಗಣಿಸಿ: ಪಂಪಾಪತಿ ಆಗ್ರಹ ನಂಜನಗೂಡು: 20 ಕೋಟಿ ರೂಪಾಯಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ ಬೆಂಗಳೂರಿನ ಇಸ್ಕಾನ್ ಶ್ರೀರಾಧಾಕೃಷ್ಣ ದೇವಸ್ಥಾನದಲ್ಲಿ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸಕ್ಕೆ ಚಿನ್ನದ ಹೊಳಪು ತೀರ್ಥಹಳ್ಳಿ: ಹಿಂದೂ- ಮುಸ್ಲಿಂ ಸೌಹಾರ್ದತೆಗೆ ಸಾಕ್ಷಿಯಾದ ಛತ್ರಕೇರಿ ಗಣೇಶೋತ್ಸವ ಶೋಭಾಯಾತ್ರೆ ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು